Advertisement
ಸುದ್ದಿಗಳು

ಕೊರೊನಾ ವೈರಸ್ ಸೋಂಕು – ಇಟಲಿಯಲ್ಲಿ 4032 ಮಂದಿ ಸಾವು | ಕೊರೊನಾ ನಿರ್ಲಕ್ಷ್ಯದಿಂದ ಇಟಲಿ ತತ್ತರ | ವೈರಸ್ ಹರಡುವುದು ನಿಯಂತ್ರಿಸಲಾಗದೆ ಕೈಚೆಲ್ಲಿದ ಇಟಲಿ ಆಡಳಿತ

Share

ಇಟಲಿ : ಕೊರೊನಾ ವೈರಸ್ ಗೆ ಇಟಲಿಯಲ್ಲಿ ಇದುವರೆಗೆ 4032 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಒಂದೇ ದಿನ 630 ಮಂದಿ ಸಾವನ್ನಪ್ಪಿದರೆ ಇಂದೂ ಸಾವಿನ ಸಂಖ್ಯೆ ಮುಂದುವರಿದಿದೆ.  ಈಗ ಇಟಲಿ ಕೊರೊನಾ ವೈರಸ್ ಗೆ ನಲುಗಿ ಹೋಗಿದ್ದು , ವೈರಸ್ ಹರಡುವುದು ತಡೆಗೆ ಸರಕಾರ ಕೈಗೊಂಡ ಕ್ರಮಗಳು ವೈಫಲ್ಯವಾಗಿ ಸರಕಾರವೇ ಕೈಚೆಲ್ಲಿದೆ. ಒಂದು ವಾರದಿಂದ ಜನರ ನಿರ್ಲಕ್ಷ್ಯವೇ ಸಾವಿನ ಸಂಖ್ಯೆ ಹೆಚ್ಚಲು ಕಾರಣವಾಗಿದೆ.

ಇಟಲಿಯ ಲೊಂಬಾರ್ಡಿ ನಗರದಲ್ಲಿ ಮೊದಲು ಕೊರೊನಾ ಕಾಣಿಸಿಕೊಂಡಿತ್ತು. ನಂತರ ಈ ನಗರದಲ್ಲಿ ಕೊರೋನಾ ವೈರಸ್​ ಪೀಡಿತರ ಸಂಖ್ಯೆ ಹೆಚ್ಚಿತು. ಇಂದು ಇಟಲಿಯಲ್ಲಿ 47021 ಪ್ರಕರಣ ಪತ್ತೆಯಾಗಿದೆ. ಇದರಲ್ಲಿ 4032 ಮಂದಿ ಸಾವನ್ನಪ್ಪಿದ್ದಾರೆ. 5129 ಮಂದಿ ಗುಣಮುಖರಾಗುತ್ತಿದ್ದಾರೆ. 2655 ಮಂದಿ ತುರ್ತುನಿಗಾದಲ್ಲಿದ್ದಾರೆ. ಮಾ.16 ರ ನಂತರ ಸಾವಿನ ಸಂಖ್ಯೆ ಹೆಚ್ಚುತ್ತಿದೆ.  ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೋಗಿಗಳು ಸಾಯುತ್ತಿದ್ದಾರೆ.

ಆರಂಭದಲ್ಲಿ  ಬಂದ್ ಗೆ ಕರೆ ನೀಡಿದ್ದರೂ  ಜನರು  ಸುತ್ತಾಡಿಕೊಂಡಿದ್ದಾರೆ. ಹೀಗಾಗಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

( Source :ಸುದ್ದಿ ಸಂಸ್ಥೆಗಳು )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

1 hour ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

2 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

5 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

5 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

12 hours ago