ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸರಕಾರ ವಿವಿಧ ಕ್ರಮ ಕೈಗೊಂಡಿದೆ. ಇದೀಗ ಸಾರ್ವಜನಿಕರೇ ಕರ್ನಾಟಕ-ಕೇರಳ ಗಡಿಭಾಗದ ರಸ್ತೆಗಳಲ್ಲಿ ಮಣ್ಣು ಸುರಿದ ರಸ್ತೆ ತಡೆ ಮಾಡಿದ್ದಾರೆ.
ಸುಳ್ಯ ಸಂಪರ್ಕ ಮಾಡುವ ಕೋಲ್ಚಾರು, ಕಲ್ಲಪ್ಪಳ್ಳಿ, ಗಾಳಿಮುಖ ಮೊದಲಾದ ಕಡೆಗಳಲ್ಲಿ ರಸ್ತೆ ತಡೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ವಾಹನಗಳ ಓಡಾಟ ನಡೆಸದಂತೆ ಎಚ್ಚರಿಕೆ ವಹಿಸಲಾಗಿದೆ. ಮಣ್ಣು ಸುರಿದ ರಸ್ತೆ ತಡೆ ಮಾಡಿರುವುದಕ್ಕೆ ವಿರೋಧವೂ ವ್ಯಕ್ತವಾಗಿದೆ.
ಸಂಪಾಜೆ ಗಡಿಭಾಗ ಹಾಗೂ ಇತರ ಜಿಲ್ಲಾ ಗಡಿಭಾಗದಲ್ಲಿ ಇಲಾಖೆಗಳ ವತಿಯಿಂದಲೇ ತಪಾಸಣೆ ನಡೆಸಿ ಅಗತ್ಯ ಕಂಡರೆ ಮಾತ್ರವೇ ಬಿಡಲಾಗುತ್ತಿದೆ. ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆರಕ್ಷಕ ಠಾಣಾ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ತಪಾಸಣೆ ನಡೆಯುತ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…