ಮಂಗಳೂರು: ಕೊರೋನಾ ವೈರಸ್ ಹರಡುವ ಭೀತಿಯಿಂದ ಭಾರತ 21 ದಿನಗಳ ಲಾಕ್ ಡೌನ್ ಆಗಿದೆ. ಅಗತ್ಯ ಸೇವೆಗಳ ಲಭ್ಯವಿದೆ ಎಂದು ಸರಕಾರ ಹೇಳಿದ್ದರೂ ಮಂಗಳೂರಿನಲ್ಲಿ ನಾಳೆಯಿಂದ ಸಂಪೂರ್ಣ ಬಂದ್ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟಿಲು ಹೇಳಿದ್ದಾರೆ. ಇಂದು ಅಗತ್ಯ ವಸ್ತು ಖರೀದಿಗೆ ಸಮಯ ಕೊಡಲಾಗಿದೆ. ನಾಳೆಯಿಂದ ಮಂಗಳೂರಿನಲ್ಲಿ ಯಾವ ದಿನಸಿ ಅಂಗಡಿಗಳು ತೆರೆದಿರುವುದಿಲ್ಲ. ಈ ಬಗ್ಗೆ ಜಿಲ್ಲೆಯ ಎಲ್ಲಾ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಆದರೆ ಜನರಿಗೆ ಬೇಕಾದ ಎಲ್ಲಾ ವಸ್ತುಗಳನ್ನು ನಾವೇ ಮನೆಗೆ ತಲುಪಿಸುತ್ತೇವೆ. ಆದರೆ ಇದನ್ನು ಹೇಗೆ ಮಾಡಬೇಕು ಎಂಬ ಬಗ್ಗೆ ಯೋಚನೆ ನಡೆಯುತ್ತಿದೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಕೇರಳ ಭಾಗದಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಅಂಬ್ಯುಲೆನ್ಸ್ ಗಳ ಮೂಲಕ ಮಂಗಳೂರಿಗೆ ರೋಗಿಗಳು ಬರುತ್ತಿರುವುದು ಗಮನಕ್ಕೆ ಬಂದಿದೆ. ಸದ್ಯದ ಸ್ಥಿತಿಯಲ್ಲಿ ಮಂಗಳೂರಿನಲ್ಲಿರುವ ಆಸ್ಪತ್ರೆ ಜಿಲ್ಲೆಯ ಜನರಿಗೇ ಸಾಕಾಗುವುದಿಲ್ಲ. ಹೀಗಾಗಿ ಹೊರಗಿನ ಯಾವುದೇ ವಾಹನ, ಅಂಬ್ಯುಲೆನ್ಸ್ ಗಳನ್ನು ಜಿಲ್ಲೆಯ ಒಳಗೆ ಬಿಡಬಾರದು ಎಂದು ನಿರ್ಧರಿಸಲಾಗಿದೆ. ಎಲ್ಲಾ ಅಂಬ್ಯುಲೆನ್ಸ್ ಗಳನ್ನು ತಲಪಾಡಿ ಗಡಿಯಲ್ಲೇ ನಿರ್ಬಂಧಿಸಲಾಗುತ್ತಿದೆ ಎಂದಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…