ಮಂಗಳೂರು: ಕೊರೋನಾ ವೈರಸ್ ಹರಡುವ ಭೀತಿಯಿಂದ ಭಾರತ 21 ದಿನಗಳ ಲಾಕ್ ಡೌನ್ ಆಗಿದೆ. ಅಗತ್ಯ ಸೇವೆಗಳ ಲಭ್ಯವಿದೆ ಎಂದು ಸರಕಾರ ಹೇಳಿದ್ದರೂ ಮಂಗಳೂರಿನಲ್ಲಿ ನಾಳೆಯಿಂದ ಸಂಪೂರ್ಣ ಬಂದ್ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟಿಲು ಹೇಳಿದ್ದಾರೆ. ಇಂದು ಅಗತ್ಯ ವಸ್ತು ಖರೀದಿಗೆ ಸಮಯ ಕೊಡಲಾಗಿದೆ. ನಾಳೆಯಿಂದ ಮಂಗಳೂರಿನಲ್ಲಿ ಯಾವ ದಿನಸಿ ಅಂಗಡಿಗಳು ತೆರೆದಿರುವುದಿಲ್ಲ. ಈ ಬಗ್ಗೆ ಜಿಲ್ಲೆಯ ಎಲ್ಲಾ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಆದರೆ ಜನರಿಗೆ ಬೇಕಾದ ಎಲ್ಲಾ ವಸ್ತುಗಳನ್ನು ನಾವೇ ಮನೆಗೆ ತಲುಪಿಸುತ್ತೇವೆ. ಆದರೆ ಇದನ್ನು ಹೇಗೆ ಮಾಡಬೇಕು ಎಂಬ ಬಗ್ಗೆ ಯೋಚನೆ ನಡೆಯುತ್ತಿದೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಕೇರಳ ಭಾಗದಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಅಂಬ್ಯುಲೆನ್ಸ್ ಗಳ ಮೂಲಕ ಮಂಗಳೂರಿಗೆ ರೋಗಿಗಳು ಬರುತ್ತಿರುವುದು ಗಮನಕ್ಕೆ ಬಂದಿದೆ. ಸದ್ಯದ ಸ್ಥಿತಿಯಲ್ಲಿ ಮಂಗಳೂರಿನಲ್ಲಿರುವ ಆಸ್ಪತ್ರೆ ಜಿಲ್ಲೆಯ ಜನರಿಗೇ ಸಾಕಾಗುವುದಿಲ್ಲ. ಹೀಗಾಗಿ ಹೊರಗಿನ ಯಾವುದೇ ವಾಹನ, ಅಂಬ್ಯುಲೆನ್ಸ್ ಗಳನ್ನು ಜಿಲ್ಲೆಯ ಒಳಗೆ ಬಿಡಬಾರದು ಎಂದು ನಿರ್ಧರಿಸಲಾಗಿದೆ. ಎಲ್ಲಾ ಅಂಬ್ಯುಲೆನ್ಸ್ ಗಳನ್ನು ತಲಪಾಡಿ ಗಡಿಯಲ್ಲೇ ನಿರ್ಬಂಧಿಸಲಾಗುತ್ತಿದೆ ಎಂದಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…