source: ANI
ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಕಾರಣದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು ಬ್ಯಾಂಕ್ ಗಳಿಂದ ಸಾಲದ ಪಡೆದಿರುವ ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಸಾಲಗಳ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಿದ್ದು, ಮೂರು ತಿಂಗಳ ಇಎಂಐಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಆರ್ ಬಿಐ ಗೌರ್ವನರ್ ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಷ್ಟ್ರೀಕೃತ, ವಾಣಿಜ್ಯ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿನ ಎಲ್ಲಾ ಸಾಲಗಳ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ವೈಯಕ್ತಿಕ, ಗೃಹ, ವಾಹನ ಸಾಲ, ಗೋಲ್ಡ್ ಲೋನ್, ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲ ಸೇರಿದಂತೆ ಎಲ್ಲಾ ಬ್ಯಾಂಕ್ ಗಳಲ್ಲಿ ಪಡೆದಿರುವ ಸಾಲದ ಇಎಂಐಯನ್ನು ಜೂನ್ ವರೆಗೂ ಮುಂದೂಡಿಕೆ ಮಾಡಲಾಗಿದೆ ಎಂದರು.
ರೈತರು ಖರೀದಿಸಿದ ಟ್ರಾಕ್ಟರ್ ಗಳ ಸಾಲದ ಬಡ್ಡಿಯನ್ನು ಕೂಡಾ ಕಡಿತಗೊಳಿಸಲಾಗಿದೆ. ಕೊರೋನಾವೈರಸ್ ನಿಂದಾಗಿ ದೇಶದ ಅರ್ಥವ್ಯವಸ್ಥೆ ಮೇಲೆ ಪರಿಣಾಮ ಉಂಟಾಗಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…