source: ANI
ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಕಾರಣದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು ಬ್ಯಾಂಕ್ ಗಳಿಂದ ಸಾಲದ ಪಡೆದಿರುವ ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಸಾಲಗಳ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಿದ್ದು, ಮೂರು ತಿಂಗಳ ಇಎಂಐಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಆರ್ ಬಿಐ ಗೌರ್ವನರ್ ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಷ್ಟ್ರೀಕೃತ, ವಾಣಿಜ್ಯ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿನ ಎಲ್ಲಾ ಸಾಲಗಳ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ವೈಯಕ್ತಿಕ, ಗೃಹ, ವಾಹನ ಸಾಲ, ಗೋಲ್ಡ್ ಲೋನ್, ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲ ಸೇರಿದಂತೆ ಎಲ್ಲಾ ಬ್ಯಾಂಕ್ ಗಳಲ್ಲಿ ಪಡೆದಿರುವ ಸಾಲದ ಇಎಂಐಯನ್ನು ಜೂನ್ ವರೆಗೂ ಮುಂದೂಡಿಕೆ ಮಾಡಲಾಗಿದೆ ಎಂದರು.
ರೈತರು ಖರೀದಿಸಿದ ಟ್ರಾಕ್ಟರ್ ಗಳ ಸಾಲದ ಬಡ್ಡಿಯನ್ನು ಕೂಡಾ ಕಡಿತಗೊಳಿಸಲಾಗಿದೆ. ಕೊರೋನಾವೈರಸ್ ನಿಂದಾಗಿ ದೇಶದ ಅರ್ಥವ್ಯವಸ್ಥೆ ಮೇಲೆ ಪರಿಣಾಮ ಉಂಟಾಗಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…