source: ANI
ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಕಾರಣದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು ಬ್ಯಾಂಕ್ ಗಳಿಂದ ಸಾಲದ ಪಡೆದಿರುವ ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಸಾಲಗಳ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಿದ್ದು, ಮೂರು ತಿಂಗಳ ಇಎಂಐಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಆರ್ ಬಿಐ ಗೌರ್ವನರ್ ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಷ್ಟ್ರೀಕೃತ, ವಾಣಿಜ್ಯ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿನ ಎಲ್ಲಾ ಸಾಲಗಳ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ವೈಯಕ್ತಿಕ, ಗೃಹ, ವಾಹನ ಸಾಲ, ಗೋಲ್ಡ್ ಲೋನ್, ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲ ಸೇರಿದಂತೆ ಎಲ್ಲಾ ಬ್ಯಾಂಕ್ ಗಳಲ್ಲಿ ಪಡೆದಿರುವ ಸಾಲದ ಇಎಂಐಯನ್ನು ಜೂನ್ ವರೆಗೂ ಮುಂದೂಡಿಕೆ ಮಾಡಲಾಗಿದೆ ಎಂದರು.
ರೈತರು ಖರೀದಿಸಿದ ಟ್ರಾಕ್ಟರ್ ಗಳ ಸಾಲದ ಬಡ್ಡಿಯನ್ನು ಕೂಡಾ ಕಡಿತಗೊಳಿಸಲಾಗಿದೆ. ಕೊರೋನಾವೈರಸ್ ನಿಂದಾಗಿ ದೇಶದ ಅರ್ಥವ್ಯವಸ್ಥೆ ಮೇಲೆ ಪರಿಣಾಮ ಉಂಟಾಗಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…