source: ANI
ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಕಾರಣದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು ಬ್ಯಾಂಕ್ ಗಳಿಂದ ಸಾಲದ ಪಡೆದಿರುವ ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಸಾಲಗಳ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಿದ್ದು, ಮೂರು ತಿಂಗಳ ಇಎಂಐಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಆರ್ ಬಿಐ ಗೌರ್ವನರ್ ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಷ್ಟ್ರೀಕೃತ, ವಾಣಿಜ್ಯ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿನ ಎಲ್ಲಾ ಸಾಲಗಳ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ವೈಯಕ್ತಿಕ, ಗೃಹ, ವಾಹನ ಸಾಲ, ಗೋಲ್ಡ್ ಲೋನ್, ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲ ಸೇರಿದಂತೆ ಎಲ್ಲಾ ಬ್ಯಾಂಕ್ ಗಳಲ್ಲಿ ಪಡೆದಿರುವ ಸಾಲದ ಇಎಂಐಯನ್ನು ಜೂನ್ ವರೆಗೂ ಮುಂದೂಡಿಕೆ ಮಾಡಲಾಗಿದೆ ಎಂದರು.
ರೈತರು ಖರೀದಿಸಿದ ಟ್ರಾಕ್ಟರ್ ಗಳ ಸಾಲದ ಬಡ್ಡಿಯನ್ನು ಕೂಡಾ ಕಡಿತಗೊಳಿಸಲಾಗಿದೆ. ಕೊರೋನಾವೈರಸ್ ನಿಂದಾಗಿ ದೇಶದ ಅರ್ಥವ್ಯವಸ್ಥೆ ಮೇಲೆ ಪರಿಣಾಮ ಉಂಟಾಗಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…