Advertisement
ಸುದ್ದಿಗಳು

ಕೊರೋನಾ ಜಾಗೃತಿ ಟ್ಯೂನ್ ಧ್ವನಿ ಇವರದು…….! .

Share

ಯಾರಪ್ಪ ಈ ರೀತಿ ತಲೆ ತಿಂತಿದಾರೆ. ಅರೇ, ಎಲ್ಲರ ಕಾಲರ್ ಟ್ಯೂನ್ ಚೇಂಜ್ ಆಗಿದೆ. ಹೇ ಕೊರೋನಾ ಜಾಗೃತಿ  ಧ್ವನಿ ಅಂತೇ ಅದು. ಅಂತ ನಮ್ಮ ಮಧ್ಯೆ ಇದ್ದ ಸಾವಿರ ಪ್ರಶ್ನೆಗಳಿಗೆ ಕಾರಣವಾದ ಧ್ವನಿ. ಇತ್ತೀಚಿನ ದಿನಗಳಲ್ಲಿ ವಿಶ್ವದಾದ್ಯಂತ ಹಬ್ಬುತ್ತಿರುವ ಕೊರೋನಾ ವೈರಸ್ ನ ಜಾಗೃತಿ ಧ್ವನಿಯು ಕಾಲರ್ ಟ್ಯೂನ್ ನ ಮೂಲಕ ಕೋಟ್ಯಂತರ ಜನರ ಕಿವಿಗೆ ತಲುಪುತ್ತಿದೆ. ಈ ಕಾಲರ್ ಟ್ಯೂನ್ ಗೆ ಕನ್ನಡ ಧ್ವನಿ ಕೊಟ್ಟ ಬಹುಮುಖ ಪ್ರತಿಭೆ ಡಾರೆಲ್ ಜೆಸಿಕಾ ಫೆರ್ನಾಂಡಿಸ್.

ಪ್ರಸ್ತುತ ದೆಹಲಿಯ ಕನ್ನಡ ಸೀನಿಯರ್ ಸೆಕೆಂಡರಿ ಸ್ಕೂಲ್ ನಲ್ಲಿ ಕಳೆದ 7 ವರ್ಷಗಳಿಂದ ದೈಹಿಕ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ತನ್ನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮಂಗಳೂರಿನ ಕಪಿತಾನಿಯೊದಲ್ಲಿ ಪಡೆದು ಪದವಿ ಶಿಕ್ಷಣವನ್ನು ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ಪಡೆದಿರುತ್ತಾರೆ. ಇವರು ಪುತ್ತೂರಿನ ಪ್ರತಿಷ್ಠಿತ ಸಂತ ಫಿಲೋಮಿನಾ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಡಿಂಪಲ್ ಜೆನಿಫರ್ ಫೆರ್ನಾಂಡಿಸ್ ಇವರ ತಂಗಿಯೂ ಹೌದು. ಮಂಗಳೂರಿನ ಹುಡುಗಿಗೆ ಪುತ್ತೂರಿನ ನಂಟೂ ಇದೆ.

ಜೆಸಿಕಾರವರಿಗೆ ಕೊರೋನಾ ಜಾಗೃತಿಯ ಕಾಲರ್ ಟ್ಯೂನ್ ಗೆ ಧ್ವನಿ ಕೊಡಲು ಪ್ರೇರೇಪಿಸಿದವರು ಖ್ಯಾತ ಯಕ್ಷಗಾನ ಕಲಾವಿದರಾದ ಸರವು ಕೃಷ್ಣ ಭಟ್. ಇವರು ಜೆಸಿಕಾರು ಕೆಲಸ ಮಾಡುತ್ತಿರುವ ಶಾಲೆಯ ಅಧ್ಯಕ್ಷರು ಕೂಡ ಹೌದು. “ನಾನು ಸರವು ಕೃಷ್ಣ ಭಟ್ ಅವರು ಹೇಳಿದರೆ ಮಾತ್ರವೇ ವಾಯ್ಸ್ ಓವರ್ ಕೊಡಲು ಹೋಗುವುದು, ಬೇರೆ ಯಾರು ಕರೆದರೂ ಇದುವರೆಗೂ ಹೋಗಲಿಲ್ಲ “ಎಂದಿದ್ದಾರೆ ಜೆಸಿಕಾ.

ಡಾರೆಲ್ ಜೆಸಿಕಾ ಇದುವರೆಗೆ 200 ಕ್ಕೂ ಹೆಚ್ಚು ಸರಕಾರದ ಯೋಜನೆ ಗಳಿಗೆ ವಾಯ್ಸ್ ಓವರ್ ನೀಡಿದ್ದಾರೆ. ತಮ್ಮ 24ನೇ ವಯಸ್ಸಿನಲ್ಲಿ ವಾಯ್ಸ್ ಓವರ್ ಕೊಡಲು ಪ್ರಾರಂಭಿಸಿದ ಇವರ ಧ್ವನಿ ಇಂದಿಗೂ ರೇಡಿಯೋ, ದೂರದರ್ಶನ ಗಳಲ್ಲಿ ಪ್ರಸಾರವಾಗುತ್ತಿದೆ.ಇವರು ಕಳೆದ 7 ವರ್ಷಗಳಿಂದ ಅನೇಕ ಜಾಹಿರಾತುಗಳಿಗೆ, ಪ್ರಕಟಣೆಗಳಿಗೆ ಧ್ವನಿ ನೀಡಿದ್ದಾರೆ.

” ಪ್ರತಿಯೊಬ್ಬರ ಫೋನ್ ನಲ್ಲಿ ತನ್ನ ಧ್ವನಿ ಪ್ರಸಾರವಾಗಬಹುದು ಎಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ. ಕನ್ನಡದಲ್ಲಿ ಕೋಟ್ಯಾಂತರ ಜನರಿಗೆ ಕೇಳಿಸುವ ಜಾಗ್ರತಿಯ ಧ್ವನಿ ನನ್ನದು ಎಂದು ಹೇಳಲು ಹೆಮ್ಮೆ ಅನಿಸುತ್ತದೆ”ಎಂದು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ ಜೆಸಿಕಾ. ಚಿಕ್ಕವಯಸ್ಸಿನಲ್ಲಿ ಸೇನೆಗೆ ಸೇರುವ ಕನಸು ಹೊತ್ತುಕೊಂಡಿದ್ದ ಇವರು ತಮ್ಮ ಕಾಲೇಜು ದಿನಗಳಲ್ಲಿ ಎನ್ ಸಿಸಿ ಕೆಡೆಟ್ ಆಗಿ ಸಂತ ಅಲೋಶಿಯಸ್ ಕಾಲೇಜಿನ 2006-07 ನೇ ಸಾಲಿನ “ಬೆಸ್ಟ್ ಎನ್ ಸಿಸಿ ಕೆಡೆಟ್ “ಎಂಬ ಹೆಸರಿಗೆ ಭಾಜನರಾಗಿದ್ದಾರೆ. ಎನ್ ಸಿಸಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ಭಾಗವಹಿಸಿ ಚಿನ್ನದ ಪದಕ ಹಾಗೂ ಪರೇಡ್ ಟ್ಯಾಲೆಂಟ್ ನಲ್ಲಿ ಬೆಳ್ಳಿಯ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಕ್ರೀಡೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದ ಇವರು ಖೋ ಖೋ, ಕಬಡ್ಡಿ, ಥ್ರೋ ಬಾಲ್, ಟೆನ್ನಿಸ್, ಫುಟ್ಬಾಲ್, ಹ್ಯಾಂಡ್ಬಾಲ್, ಅಥ್ಲೆಟಿಕ್ಸ್ ಮುಂತಾದ ಕ್ರೀಡೆಯಲ್ಲಿ ಭಾಗವಹಿಸಿರುತ್ತಾರೆ. ಜೆಸಿಕಾರವರು ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು, 2010ರಲ್ಲಿ ರಾಜಸ್ತಾನ ದಲ್ಲಿ ನಡೆದ ರಾಷ್ಟ್ರ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.

ಜೆಸಿಕಾರವರು ಕ್ರೀಡಾ ಲೋಕಕ್ಕೆ ಮಾತ್ರ ಸೀಮಿತವಾಗಿರದೆ ನಾಟಕ, ಚಿತ್ರಕಲೆ, ಡಾನ್ಸ್, ಮುಂತಾದ ಕ್ಷೇತ್ರಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕಲಿಕೆಯಲ್ಲೂ ಇವರು ಎತ್ತಿದ ಕೈ. ಬಿ ಪಿ ಎಡ್ ನಲ್ಲಿ 2ನೇ ರಾಂಕ್ ಹಾಗೂ ಎಮ್ ಪಿ ಎಡ್ ನಲ್ಲೂ 2ನೇ ರಾಂಕ್ ಪಡೆದು ಸೈ ಎನಿಸಿಕೊಂಡಿದ್ದಾರೆ.

ಸೈನ್ಯದಲ್ಲಿ ಡ್ರಿಲ್ ಇನ್ಸ್ಟ್ರಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಡೊರ್ಜೆ ಜೋಷುಆ ಇವರೊಂದಿಗೆ ವಿವಾಹವಾದ ಇವರು ವಲೇರಿಯನ್ ಫೆರ್ನಾಂಡಿಸ್ ಹಾಗೂ ಲವೀನಾ ಫೆರ್ನಾಂಡಿಸ್ ದಂಪತಿಗಳ ಪುತ್ರಿ. ಡಾರೆಲ್ ಜೆಸಿಕಾ ಫೆರ್ನಾಂಡಿಸ್ ರವರ ಮುಂದಿನ ಜೀವನ ಉಜ್ವಲವಾಗಿರಲಿ ಎಂದು ಆಶಿಸೋಣ.

– ಲಾವಣ್ಯ. ಎಸ್.  ಪತ್ರಿಕೋದ್ಯಮ ವಿದ್ಯಾರ್ಥಿನಿ ,

ಸಂತ ಫಿಲೋಮಿನಾ ಕಾಲೇಜು ಪುತ್ತೂರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

4 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

22 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago