ಕೊರೋನಾ ನಿಗ್ರಹಿಸುವ ಬದಲು ಭ್ರಷ್ಟಾಚಾರದಲ್ಲಿ ಮುಳುಗಿದ ಸರಕಾರ – ಆರೋಪ

July 6, 2020
2:32 PM
 ಮಂಗಳೂರು: ಕೊರೋನಾ ವೈರಸ್ ನ ಹರಡುವಿಕೆ ದೇಶದಲ್ಲಿ ಅತ್ಯಂತ ಅಪಾಯದಲ್ಲಿದ್ದು,ಸಾಮುದಾಯಿಕವಾಗಿ ವಿಸ್ತರಿಸುತ್ತಿದೆ.ಈಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೈಕಟ್ಟಿ ಕುಳಿತಿದೆ ಸಿಪಿಐಎಂ  ಮಂಗಳೂರು ನಗರ ಮುಖಂಡರಾದ ಪ್ರದೀಪ್ ಕುಮಾರ್ ರವರು ಕೇಂದ್ರ, ರಾಜ್ಯ ಸರಕಾರಗಳನ್ನು  ಟೀಕಿಸಿದರು.
ಜನರ ಜೀವವನ್ನು ರಕ್ಷಿಸುವ ಬದಲು ವೈದ್ಯಕೀಯ ಉಪಕರಣಗಳನ್ನು ಖರೀದಿಸುವಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಅತ್ತ ಕೇಂದ್ರ ಸರ್ಕಾರವೂ ಇದೇ ಸಂಧರ್ಭವನ್ನು ದುರುಪಯೋಗಪಡಿಸಿ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣಕ್ಕೆ ಮುಂದಾಗಿದೆ. ಜನರ ಕೈಗೆ ನೇರ ನಗದು ವರ್ಗಾವಣೆ ಮಾಡುವ ಮೂಲಕ ದೇಶದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸುವ ಬದಲು,ಈಗಾಗಲೇ ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂ.ಯ ಪರಿಹಾರದಲ್ಲಿ ಬಹುಪಾಲನ್ನು ದೇಶದ ಕಾರ್ಪೊರೇಟ್ ಕಂಪೆನಿಗಳಿಗೆ ನೀಡುವ ಮೂಲಕ ಜನತೆಯ ಬದುಕನ್ನು ಸರ್ವನಾಶ ಮಾಡಲು ಹೊರಟಿದೆ  ಎಂದು  ಸಿಪಿಐಎಂ ಮಂಗಳೂರು ನಗರ ಮುಖಂಡರಾದ ಪ್ರದೀಪ್ ಕುಮಾರ್ ರವರು ಕೇಂದ್ರ, ರಾಜ್ಯ ಸರಕಾರಗಳನ್ನು  ಟೀಕಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ಹಿರಿಯ ಸದಸ್ಯರಾದ ಕಿಶೋರ್, ರಘುವೀರ್,ಕಟ್ಟಡ ಕಾರ್ಮಿಕರ ಸಂಘಟನೆಯ ನಾಯಕರಾದ ಮನೋಜ್, ಡಿವೈಎಫ್ ಐ  ನಾಯಕರಾದ ಪ್ರಶಾಂತ್ , ನಾಗೇಂದ್ರ, ಸನತ್, ಮಹಿಳಾ ಮುಖಂಡರಾದ ಸರೋಜಿನಿ, ಹರಿಣಾಕ್ಷಿ ಮುಂತಾದವರು ಹಾಜರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror