Advertisement
ಸುದ್ದಿಗಳು

ಕೊರೋನಾ ನಿಗ್ರಹಿಸುವ ಬದಲು ಭ್ರಷ್ಟಾಚಾರದಲ್ಲಿ ಮುಳುಗಿದ ಸರಕಾರ – ಆರೋಪ

Share
ಮಂಗಳೂರು: ಕೊರೋನಾ ವೈರಸ್ ನ ಹರಡುವಿಕೆ ದೇಶದಲ್ಲಿ ಅತ್ಯಂತ ಅಪಾಯದಲ್ಲಿದ್ದು,ಸಾಮುದಾಯಿಕವಾಗಿ ವಿಸ್ತರಿಸುತ್ತಿದೆ.ಈಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೈಕಟ್ಟಿ ಕುಳಿತಿದೆ ಸಿಪಿಐಎಂ  ಮಂಗಳೂರು ನಗರ ಮುಖಂಡರಾದ ಪ್ರದೀಪ್ ಕುಮಾರ್ ರವರು ಕೇಂದ್ರ, ರಾಜ್ಯ ಸರಕಾರಗಳನ್ನು  ಟೀಕಿಸಿದರು.
ಜನರ ಜೀವವನ್ನು ರಕ್ಷಿಸುವ ಬದಲು ವೈದ್ಯಕೀಯ ಉಪಕರಣಗಳನ್ನು ಖರೀದಿಸುವಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಅತ್ತ ಕೇಂದ್ರ ಸರ್ಕಾರವೂ ಇದೇ ಸಂಧರ್ಭವನ್ನು ದುರುಪಯೋಗಪಡಿಸಿ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣಕ್ಕೆ ಮುಂದಾಗಿದೆ. ಜನರ ಕೈಗೆ ನೇರ ನಗದು ವರ್ಗಾವಣೆ ಮಾಡುವ ಮೂಲಕ ದೇಶದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸುವ ಬದಲು,ಈಗಾಗಲೇ ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂ.ಯ ಪರಿಹಾರದಲ್ಲಿ ಬಹುಪಾಲನ್ನು ದೇಶದ ಕಾರ್ಪೊರೇಟ್ ಕಂಪೆನಿಗಳಿಗೆ ನೀಡುವ ಮೂಲಕ ಜನತೆಯ ಬದುಕನ್ನು ಸರ್ವನಾಶ ಮಾಡಲು ಹೊರಟಿದೆ  ಎಂದು  ಸಿಪಿಐಎಂ ಮಂಗಳೂರು ನಗರ ಮುಖಂಡರಾದ ಪ್ರದೀಪ್ ಕುಮಾರ್ ರವರು ಕೇಂದ್ರ, ರಾಜ್ಯ ಸರಕಾರಗಳನ್ನು  ಟೀಕಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ಹಿರಿಯ ಸದಸ್ಯರಾದ ಕಿಶೋರ್, ರಘುವೀರ್,ಕಟ್ಟಡ ಕಾರ್ಮಿಕರ ಸಂಘಟನೆಯ ನಾಯಕರಾದ ಮನೋಜ್, ಡಿವೈಎಫ್ ಐ  ನಾಯಕರಾದ ಪ್ರಶಾಂತ್ , ನಾಗೇಂದ್ರ, ಸನತ್, ಮಹಿಳಾ ಮುಖಂಡರಾದ ಸರೋಜಿನಿ, ಹರಿಣಾಕ್ಷಿ ಮುಂತಾದವರು ಹಾಜರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

7 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

8 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

8 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

22 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

23 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

2 days ago