Advertisement
ಸುದ್ದಿಗಳು

ಕೊರೋನಾ ನಿಗ್ರಹಿಸುವ ಬದಲು ಭ್ರಷ್ಟಾಚಾರದಲ್ಲಿ ಮುಳುಗಿದ ಸರಕಾರ – ಆರೋಪ

Share
ಮಂಗಳೂರು: ಕೊರೋನಾ ವೈರಸ್ ನ ಹರಡುವಿಕೆ ದೇಶದಲ್ಲಿ ಅತ್ಯಂತ ಅಪಾಯದಲ್ಲಿದ್ದು,ಸಾಮುದಾಯಿಕವಾಗಿ ವಿಸ್ತರಿಸುತ್ತಿದೆ.ಈಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೈಕಟ್ಟಿ ಕುಳಿತಿದೆ ಸಿಪಿಐಎಂ  ಮಂಗಳೂರು ನಗರ ಮುಖಂಡರಾದ ಪ್ರದೀಪ್ ಕುಮಾರ್ ರವರು ಕೇಂದ್ರ, ರಾಜ್ಯ ಸರಕಾರಗಳನ್ನು  ಟೀಕಿಸಿದರು.
ಜನರ ಜೀವವನ್ನು ರಕ್ಷಿಸುವ ಬದಲು ವೈದ್ಯಕೀಯ ಉಪಕರಣಗಳನ್ನು ಖರೀದಿಸುವಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಅತ್ತ ಕೇಂದ್ರ ಸರ್ಕಾರವೂ ಇದೇ ಸಂಧರ್ಭವನ್ನು ದುರುಪಯೋಗಪಡಿಸಿ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣಕ್ಕೆ ಮುಂದಾಗಿದೆ. ಜನರ ಕೈಗೆ ನೇರ ನಗದು ವರ್ಗಾವಣೆ ಮಾಡುವ ಮೂಲಕ ದೇಶದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸುವ ಬದಲು,ಈಗಾಗಲೇ ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂ.ಯ ಪರಿಹಾರದಲ್ಲಿ ಬಹುಪಾಲನ್ನು ದೇಶದ ಕಾರ್ಪೊರೇಟ್ ಕಂಪೆನಿಗಳಿಗೆ ನೀಡುವ ಮೂಲಕ ಜನತೆಯ ಬದುಕನ್ನು ಸರ್ವನಾಶ ಮಾಡಲು ಹೊರಟಿದೆ  ಎಂದು  ಸಿಪಿಐಎಂ ಮಂಗಳೂರು ನಗರ ಮುಖಂಡರಾದ ಪ್ರದೀಪ್ ಕುಮಾರ್ ರವರು ಕೇಂದ್ರ, ರಾಜ್ಯ ಸರಕಾರಗಳನ್ನು  ಟೀಕಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ಹಿರಿಯ ಸದಸ್ಯರಾದ ಕಿಶೋರ್, ರಘುವೀರ್,ಕಟ್ಟಡ ಕಾರ್ಮಿಕರ ಸಂಘಟನೆಯ ನಾಯಕರಾದ ಮನೋಜ್, ಡಿವೈಎಫ್ ಐ  ನಾಯಕರಾದ ಪ್ರಶಾಂತ್ , ನಾಗೇಂದ್ರ, ಸನತ್, ಮಹಿಳಾ ಮುಖಂಡರಾದ ಸರೋಜಿನಿ, ಹರಿಣಾಕ್ಷಿ ಮುಂತಾದವರು ಹಾಜರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

2 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

6 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

7 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

16 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

16 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

22 hours ago