Advertisement

ಕೊರೋನಾ ಪರಿಸ್ಥಿತಿ ಎದುರಿಸಲು ತಾಲೂಕು ಆಡಳಿತ ಸಿದ್ಧವಾಗಿದೆ – ಅಂಗಾರ

Share

ಸುಳ್ಯ: ಕೊರೋನಾ ವೈರಸ್ ಪೀಡಿತರ ಸಂಖ್ಯೆಯು ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರುತ್ತಿದ್ದು ಸುಳ್ಯ ತಾಲೂಕು ಆಡಳಿತವು ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿದೆ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

Advertisement

ಸುಳ್ಯ ತಾಲೂಕಿನಲ್ಲಿ ಈವರೆಗೆ ಒಟ್ಟು 16  ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆಯ ತುರ್ತು ನಿಗಾಘಟಕದಲ್ಲಿ ಕೆಲಸ ಮಾಡಿದ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್ಗಾಗಿ ಎರಡು ದಿನಗಳ ಕಾಲ ಸೇವೆ ಸ್ಥಗಿತಗೊಳಿಸಲಾಗಿದ್ದು ಶನಿವಾರದಿಂದ ಆಸ್ಪತ್ರೆಯ ಸೇವೆಯು ಪುನರಾರಂಭಗೊಳ್ಳಲಿದೆ. ರೋಗಲಕ್ಷಣಗಳಿಲ್ಲದೆ ಕೊರೋನ ವರದಿ ಪಾಸಿಟಿವ್ ಬಂದಿರುವ ವ್ಯಕ್ತಿಗಳಿಗೆ ನಿಯಮಗಳ ಪ್ರಕಾರ ಹೋಮ್ ಐಸೋಲೇಷನ್‌ಗೆ ಸೂಚಿಸುತ್ತಿದ್ದು ಮನೆಗಳಲ್ಲಿಯೇ ವಿಶ್ರಾಂತಿ ಹಾಗೂ ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ. ಮನೆಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಇಲ್ಲದಿರುವ ಮತ್ತು ಜನನಿಬಿಡ ಕಾಲೊನಿಗಳಲ್ಲಿರುವ ರೋಗ ಲಕ್ಷಣವಿಲ್ಲದ ಪಾಸಿಟಿವ್ ಬಂದ ವ್ಯಕ್ತಿಗಳಿಗೆ, ಹಿಂದುಳಿದ ವರ್ಗಗಳ ಇಲಾಖೆಗೆ ಸಂಬಂಧಪಟ್ಟ ವಿದ್ಯಾರ್ಥಿನಿಲಯ, ಹಾಗೂ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ ಅಗತ್ಯಬಿದ್ದಲ್ಲಿ ತಾಲೂಕಿನ ಇತರೆ ಕಡೆಗಳಲ್ಲಿರುವ ಹಾಸ್ಟೆಲ್‌ಗಳಲ್ಲಿ ಕೂಡಾ ವ್ಯವಸ್ಥೆ ಸಿದ್ಧಗೊಳಿಸಲು ಸೂಚಿಸಲಾಗಿದೆ , ಜ್ವರ ಮತ್ತಿತರ ರೋಗಲಕ್ಷಣಗಳಿರುವ ವ್ಯಕ್ತಿಗಳ ಚಿಕಿತ್ಸೆಗಾಗಿ ಈಗಾಗಲೇ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜು ಆಸ್ಪತ್ರೆ, ಕವಿ.ಜಿ ಆಯುರ್ವೇದ ಆಸ್ಪತ್ರೆ, ಜ್ಯೋತಿ ಆಸ್ಪತ್ರೆಯಲ್ಲಿ ಪ್ರತ್ಯೇಕ ಬೆಡ್‌ಗಳನ್ನು ಮೀಸಲಿರಿಸಲಾಗಿದೆ. ಅಲ್ಲದೆ ತೀವ್ರ ರೋಗಲಕ್ಷಣವಾದ ಉಸಿರಾಟದ ತೊಂದರೆಯಿರುವವರಿಗೆ ಆಕ್ಸಿಜನ್, ವೆಂಟಿಲೇಟರ್ ಸಹಿತ ವ್ಯವಸ್ಥೆಯನ್ನು ಕೆ.ವಿ.ಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮಾಡಲಾಗಿರುತ್ತದೆ. ಕೊರೋನಾ ಕುರಿತ ಜಾಗೃತಿಗಾಗಿ ಮತ್ತು ಅಗತ್ಯ ಸಂದರ್ಭಗಳಲ್ಲಿ ಆರೋಗ್ಯ ಇಲಾಖೆಗೆ ನೆರವಾಗಲು ಗ್ರಾಮ ಪಂಚಾಯತ್ ಮಟ್ಟಗಳಲ್ಲಿ ಸಮಿತಿಯನ್ನು ರಚಿಸಲಾಗಿದೆ . ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಾರ್ಡ್ ಮಟ್ಟದಲ್ಲಿ ಸಮಿತಿಯನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ . ಸುಳ್ಯ ತಾಲೂಕಿನಲ್ಲಿ ಅತೀವ ಮಳೆಯಾಗುತ್ತಿದ್ದು , ಈ ಸಂದರ್ಭದಲ್ಲಿ ಕೊರೋನಾ ಮಾತ್ರವಲ್ಲದೆ ಇತರೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಸ್ವಯಂನಿಯತ್ರಣ ಹೇರಿಕೊಂಡು ಸಾಮಾಜಿಕ ಅಂತರ ಕಾಪಾಡುವುದು, ಕಡ್ಡಾಯ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಹಾಗೂ ಅಗತ್ಯ ಕೆಲಸಗಳಿಗೆ ಮಾತ್ರ ನಗರ ಪ್ರದೇಶಗಳಿಗೆ ಬಂದು ಹೋಗುವಂತೆ ಹಾಗೂ ವರ್ತಕರು ಸ್ವ ಇಚ್ಛೆಯಿಂದ ಅಂಗಡಿ ಮುಂಗಟ್ಟುಗಳನ್ನು ನಿರ್ದಿಷ್ಟ ಸಮಯ ಮಾತ್ರ ತೆರೆದಿಟ್ಟು ಸಹಕರಿಸಬೇಕಾಗಿ ವಿನಂತಿಸಿಕೊಳ್ಳಲಾಗಿದೆ ಎಂದು ಅಂಗಾರ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

1 hour ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

7 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

11 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

12 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

12 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

23 hours ago