ಕೊರೋನಾ ಸೋಂಕಿಗೆ ಒಳಗಾದವರು ಯಾವುದೇ ಕಾರಣಕ್ಕೂ ಆತಂಕಕ್ಕೆ , ಭಯಕ್ಕೆ ಒಳಗಾಗಬೇಡಿ, ಮಾನಸಿಕ ಧೈರ್ಯ ತಂದುಕೊಂಡು ಚಿಕಿತ್ಸೆ ಮಾಡಿಸಿಕೊಳ್ಳಿ ಎಂದು ಸಚಿವ ಸಿ ಟಿ ರವಿ ಚಿಕ್ಕಮಗಳೂರಿನ ತಮ್ಮ ಮನೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಜನರಿಗೆ ಧೈರ್ಯ ತುಂಬಿದ್ದಾರೆ.
ಕೊರೋನಾ ಪಾಸಿಟಿವ್ ಬಂದ ಬಳಿಕ 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಪಡೆದ ಸಿ ಟಿ ರವಿ ಸಂಪೂರ್ಣವಾಗಿ ಗುಣಮುಖರಾದ ಬಳಿಕ ಇದೀಗ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಮಾಡಿರುವ ಸಿ ಟಿ ರವಿ ಅವರು ಡಾ.ಗಿರಿಧರ್ ಕಜೆ ಅವರು ನೀಡುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ಸ್ವೀಕರಿಸುವುದರ ಜೊತೆಗೆ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ ಸೇವಿಸಿದ್ದರು. ಹೀಗಾಗಿ ಯಾರೇ ಕೊರೋನಾ ಸೋಂಕು ತಗುಲಿದರೂ ಅಥವಾ ತಗುಲದೇ ಇದ್ದರೂ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ, ಜೊತೆಗೆ ದಿನಕ್ಕೆ ನಾಲ್ಕೈದು ಲೀಟರ್ ನಷ್ಟು ಬಿಸಿ ನೀರು ಕುಡಿಯುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ. ಕೊರೋನಾ ಬಂದರೆ ಯಾರು ಹೆದರಬೇಡಿ ಎಂದು ಜನರಿಗೆ ಮನವಿ ಮಾಡಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.