ಕೊರೋನಾ ಸೋಂಕಿಗೆ ಒಳಗಾದವರು ಯಾವುದೇ ಕಾರಣಕ್ಕೂ ಆತಂಕಕ್ಕೆ , ಭಯಕ್ಕೆ ಒಳಗಾಗಬೇಡಿ, ಮಾನಸಿಕ ಧೈರ್ಯ ತಂದುಕೊಂಡು ಚಿಕಿತ್ಸೆ ಮಾಡಿಸಿಕೊಳ್ಳಿ ಎಂದು ಸಚಿವ ಸಿ ಟಿ ರವಿ ಚಿಕ್ಕಮಗಳೂರಿನ ತಮ್ಮ ಮನೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಜನರಿಗೆ ಧೈರ್ಯ ತುಂಬಿದ್ದಾರೆ.
ಕೊರೋನಾ ಪಾಸಿಟಿವ್ ಬಂದ ಬಳಿಕ 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಪಡೆದ ಸಿ ಟಿ ರವಿ ಸಂಪೂರ್ಣವಾಗಿ ಗುಣಮುಖರಾದ ಬಳಿಕ ಇದೀಗ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಮಾಡಿರುವ ಸಿ ಟಿ ರವಿ ಅವರು ಡಾ.ಗಿರಿಧರ್ ಕಜೆ ಅವರು ನೀಡುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ಸ್ವೀಕರಿಸುವುದರ ಜೊತೆಗೆ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ ಸೇವಿಸಿದ್ದರು. ಹೀಗಾಗಿ ಯಾರೇ ಕೊರೋನಾ ಸೋಂಕು ತಗುಲಿದರೂ ಅಥವಾ ತಗುಲದೇ ಇದ್ದರೂ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ, ಜೊತೆಗೆ ದಿನಕ್ಕೆ ನಾಲ್ಕೈದು ಲೀಟರ್ ನಷ್ಟು ಬಿಸಿ ನೀರು ಕುಡಿಯುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ. ಕೊರೋನಾ ಬಂದರೆ ಯಾರು ಹೆದರಬೇಡಿ ಎಂದು ಜನರಿಗೆ ಮನವಿ ಮಾಡಿದರು.
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…