ಕೊರೋನಾ ಸೋಂಕಿಗೆ ಒಳಗಾದವರು ಯಾವುದೇ ಕಾರಣಕ್ಕೂ ಆತಂಕಕ್ಕೆ , ಭಯಕ್ಕೆ ಒಳಗಾಗಬೇಡಿ, ಮಾನಸಿಕ ಧೈರ್ಯ ತಂದುಕೊಂಡು ಚಿಕಿತ್ಸೆ ಮಾಡಿಸಿಕೊಳ್ಳಿ ಎಂದು ಸಚಿವ ಸಿ ಟಿ ರವಿ ಚಿಕ್ಕಮಗಳೂರಿನ ತಮ್ಮ ಮನೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಜನರಿಗೆ ಧೈರ್ಯ ತುಂಬಿದ್ದಾರೆ.
ಕೊರೋನಾ ಪಾಸಿಟಿವ್ ಬಂದ ಬಳಿಕ 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಪಡೆದ ಸಿ ಟಿ ರವಿ ಸಂಪೂರ್ಣವಾಗಿ ಗುಣಮುಖರಾದ ಬಳಿಕ ಇದೀಗ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಮಾಡಿರುವ ಸಿ ಟಿ ರವಿ ಅವರು ಡಾ.ಗಿರಿಧರ್ ಕಜೆ ಅವರು ನೀಡುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ಸ್ವೀಕರಿಸುವುದರ ಜೊತೆಗೆ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ ಸೇವಿಸಿದ್ದರು. ಹೀಗಾಗಿ ಯಾರೇ ಕೊರೋನಾ ಸೋಂಕು ತಗುಲಿದರೂ ಅಥವಾ ತಗುಲದೇ ಇದ್ದರೂ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ, ಜೊತೆಗೆ ದಿನಕ್ಕೆ ನಾಲ್ಕೈದು ಲೀಟರ್ ನಷ್ಟು ಬಿಸಿ ನೀರು ಕುಡಿಯುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ. ಕೊರೋನಾ ಬಂದರೆ ಯಾರು ಹೆದರಬೇಡಿ ಎಂದು ಜನರಿಗೆ ಮನವಿ ಮಾಡಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…