ಕೊರೋನಾ ಸೋಂಕಿಗೆ ಒಳಗಾದವರು ಯಾವುದೇ ಕಾರಣಕ್ಕೂ ಆತಂಕಕ್ಕೆ , ಭಯಕ್ಕೆ ಒಳಗಾಗಬೇಡಿ, ಮಾನಸಿಕ ಧೈರ್ಯ ತಂದುಕೊಂಡು ಚಿಕಿತ್ಸೆ ಮಾಡಿಸಿಕೊಳ್ಳಿ ಎಂದು ಸಚಿವ ಸಿ ಟಿ ರವಿ ಚಿಕ್ಕಮಗಳೂರಿನ ತಮ್ಮ ಮನೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಜನರಿಗೆ ಧೈರ್ಯ ತುಂಬಿದ್ದಾರೆ.
ಕೊರೋನಾ ಪಾಸಿಟಿವ್ ಬಂದ ಬಳಿಕ 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಪಡೆದ ಸಿ ಟಿ ರವಿ ಸಂಪೂರ್ಣವಾಗಿ ಗುಣಮುಖರಾದ ಬಳಿಕ ಇದೀಗ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಮಾಡಿರುವ ಸಿ ಟಿ ರವಿ ಅವರು ಡಾ.ಗಿರಿಧರ್ ಕಜೆ ಅವರು ನೀಡುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ಸ್ವೀಕರಿಸುವುದರ ಜೊತೆಗೆ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ ಸೇವಿಸಿದ್ದರು. ಹೀಗಾಗಿ ಯಾರೇ ಕೊರೋನಾ ಸೋಂಕು ತಗುಲಿದರೂ ಅಥವಾ ತಗುಲದೇ ಇದ್ದರೂ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ, ಜೊತೆಗೆ ದಿನಕ್ಕೆ ನಾಲ್ಕೈದು ಲೀಟರ್ ನಷ್ಟು ಬಿಸಿ ನೀರು ಕುಡಿಯುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ. ಕೊರೋನಾ ಬಂದರೆ ಯಾರು ಹೆದರಬೇಡಿ ಎಂದು ಜನರಿಗೆ ಮನವಿ ಮಾಡಿದರು.
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…