ಕೊರೋನಾ ಸೋಂಕಿಗೆ ಒಳಗಾದವರು ಯಾವುದೇ ಕಾರಣಕ್ಕೂ ಆತಂಕಕ್ಕೆ , ಭಯಕ್ಕೆ ಒಳಗಾಗಬೇಡಿ, ಮಾನಸಿಕ ಧೈರ್ಯ ತಂದುಕೊಂಡು ಚಿಕಿತ್ಸೆ ಮಾಡಿಸಿಕೊಳ್ಳಿ ಎಂದು ಸಚಿವ ಸಿ ಟಿ ರವಿ ಚಿಕ್ಕಮಗಳೂರಿನ ತಮ್ಮ ಮನೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಜನರಿಗೆ ಧೈರ್ಯ ತುಂಬಿದ್ದಾರೆ.
ಕೊರೋನಾ ಪಾಸಿಟಿವ್ ಬಂದ ಬಳಿಕ 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಪಡೆದ ಸಿ ಟಿ ರವಿ ಸಂಪೂರ್ಣವಾಗಿ ಗುಣಮುಖರಾದ ಬಳಿಕ ಇದೀಗ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಮಾಡಿರುವ ಸಿ ಟಿ ರವಿ ಅವರು ಡಾ.ಗಿರಿಧರ್ ಕಜೆ ಅವರು ನೀಡುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ಸ್ವೀಕರಿಸುವುದರ ಜೊತೆಗೆ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ ಸೇವಿಸಿದ್ದರು. ಹೀಗಾಗಿ ಯಾರೇ ಕೊರೋನಾ ಸೋಂಕು ತಗುಲಿದರೂ ಅಥವಾ ತಗುಲದೇ ಇದ್ದರೂ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ, ಜೊತೆಗೆ ದಿನಕ್ಕೆ ನಾಲ್ಕೈದು ಲೀಟರ್ ನಷ್ಟು ಬಿಸಿ ನೀರು ಕುಡಿಯುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ. ಕೊರೋನಾ ಬಂದರೆ ಯಾರು ಹೆದರಬೇಡಿ ಎಂದು ಜನರಿಗೆ ಮನವಿ ಮಾಡಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…