ಕೊರೋನಾ ಸೋಂಕಿಗೆ ಒಳಗಾದವರು ಯಾವುದೇ ಕಾರಣಕ್ಕೂ ಆತಂಕಕ್ಕೆ , ಭಯಕ್ಕೆ ಒಳಗಾಗಬೇಡಿ, ಮಾನಸಿಕ ಧೈರ್ಯ ತಂದುಕೊಂಡು ಚಿಕಿತ್ಸೆ ಮಾಡಿಸಿಕೊಳ್ಳಿ ಎಂದು ಸಚಿವ ಸಿ ಟಿ ರವಿ ಚಿಕ್ಕಮಗಳೂರಿನ ತಮ್ಮ ಮನೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಜನರಿಗೆ ಧೈರ್ಯ ತುಂಬಿದ್ದಾರೆ.
ಕೊರೋನಾ ಪಾಸಿಟಿವ್ ಬಂದ ಬಳಿಕ 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಪಡೆದ ಸಿ ಟಿ ರವಿ ಸಂಪೂರ್ಣವಾಗಿ ಗುಣಮುಖರಾದ ಬಳಿಕ ಇದೀಗ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಮಾಡಿರುವ ಸಿ ಟಿ ರವಿ ಅವರು ಡಾ.ಗಿರಿಧರ್ ಕಜೆ ಅವರು ನೀಡುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ಸ್ವೀಕರಿಸುವುದರ ಜೊತೆಗೆ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ ಸೇವಿಸಿದ್ದರು. ಹೀಗಾಗಿ ಯಾರೇ ಕೊರೋನಾ ಸೋಂಕು ತಗುಲಿದರೂ ಅಥವಾ ತಗುಲದೇ ಇದ್ದರೂ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ, ಜೊತೆಗೆ ದಿನಕ್ಕೆ ನಾಲ್ಕೈದು ಲೀಟರ್ ನಷ್ಟು ಬಿಸಿ ನೀರು ಕುಡಿಯುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ. ಕೊರೋನಾ ಬಂದರೆ ಯಾರು ಹೆದರಬೇಡಿ ಎಂದು ಜನರಿಗೆ ಮನವಿ ಮಾಡಿದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…