ಕೊರೋನಾ ವೈರಸ್ (ಕೋವಿಡ್ -19) ಸಾಂಕ್ರಾಮಿಕ ರೋಗ ಇಲ್ಲಿಗೇ ಮುಗಿಯುತ್ತಿಲ್ಲ. ಇದರ ಭೀಕರತೆ ಇನ್ನು ಬರಬೇಕಿದೆ. ಸರ್ಕಾರಗಳು ಸರಿಯಾದ ಕ್ರಮಗಳನ್ನು ಜಾರಿಗೆ ತರಲು ಈಗಲೂ ಪ್ರಾರಂಭಿಸದಿದ್ದರೆ ವೈರಸ್ ಇನ್ನೂ ಅನೇಕ ಜನರಿಗೆ ತಗಲುತ್ತದೆ ಎಂದು ಡಬ್ಲ್ಯುಎಚ್ಒ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಹೇಳಿದ್ದಾರೆ.
ಕೊರೋನಾ ವೈರಸ್ ಹರಡಲು ಪ್ರಾರಂಭವಾದ ಆರು ತಿಂಗಳ ನಂತರ ವಿಶ್ವ ಆರೋಗ್ಯ ಸಂಸ್ಥೆ ಮತ್ತೊಮ್ಮೆ ಎಚ್ಚರಿಸಿದೆ. ಕೊರೋನಾ ಬಗ್ಗೆ ಮಾತನಾಡಿದ ಡಬ್ಲ್ಯುಎಚ್ಒ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಇದುವರೆಗೆ ಕೊರೋನಾ ಟೆಸ್ಟಿಂಗ್, ಟ್ರೇಸಿಂಗ್ ಹಾಗೂ ಐಸೋಲೇಶನ್, ಕ್ವಾರಂಟೈನ್ ನಲ್ಲಿಯೇ ಕೊರೋನಾ ವೈರಸ್ ತಡೆಯ ಹಂತದಲ್ಲೇ ಉಳಿದಿದೆ. ಅದಕ್ಕಿಂತ ದಾಟಿ ಮುಂದೆ ಸಾಗಬೇಕಿದೆ. ಏಕೆಂದರೆ “ಕೊರೋನಾ ವೈರಸ್ ಕೊನೆಗೊಂಡಿಲ್ಲ, ಇನ್ನಷ್ಟೇ ಗಂಭೀರ ಹಂತ ತಲುಪಲಿದೆ ಎಂದು ಹೇಳಲು ನನಗೆ ವಿಷಾದವಿದೆ. ನಾವು ಈಗಾಗಲೇ ಬಹಳಷ್ಟು ಕಳೆದುಕೊಂಡಿದ್ದೇವೆ. ಇದಕ್ಕಿಂತಲೂ ಕೆಟ್ಟ ಪರಿಸ್ಥಿತಿ ಮುಂದೆ ಬರಲಿದೆ ಎನ್ನುವುದಕ್ಕೆ ವೇದನೆಯಾಗುತ್ತದೆ ಎಂದರು.
ಈಗಾಗಲೇ ಸಾವನ್ನಪ್ಪಿದ ರೋಗಿಗಳ ಸಂಖ್ಯೆ ಈಗ 5,00,000 ಕ್ಕಿಂತ ಹೆಚ್ಚಾಗಿದೆ. ವಿಶ್ವದ ಅರ್ಧದಷ್ಟು ಪ್ರಕರಣಗಳು ಯುಎಸ್ ಮತ್ತು ಯುರೋಪಿನಲ್ಲಿವೆ ಆದರೆ ಕೋವಿಡ್ -19 ಅಮೆರಿಕದಲ್ಲಿ ಈಗ ವೇಗವಾಗಿ ಬೆಳೆಯುತ್ತಿದೆ. ದಕ್ಷಿಣ ಏಷ್ಯಾ ಮತ್ತು ಆಫ್ರಿಕಾದ ಮೇಲೂ ಪರಿಣಾಮ ಬೀರುತ್ತಿದೆ, ಅಲ್ಲಿ ಜುಲೈ ಅಂತ್ಯದವರೆಗೆ ಇದು ಕಡಿಮೆಯಾಗುವ ನಿರೀಕ್ಷೆ ಇಲ್ಲ ಎಂದ ಅಧಾನೊಮ್ ಘೆಬ್ರೆಯೆಸಸ್ ನಾವೆಲ್ಲರೂ ಇದು ಮುಗಿಯಬೇಕೆಂದು ಬಯಸುತ್ತೇವೆ, ನಾವೆಲ್ಲರೂ ನಮ್ಮ ಸುಂದರ ಜೀವನವನ್ನು ಮುಂದುವರಿಸಲು ಬಯಸುತ್ತೇವೆ. ಆದರೆ ಕಠಿಣ ವಾಸ್ತವವೆಂದರೆ ಇದು ಮುಗಿಯುವುದು ದೂರದಲ್ಲಿದೆ ಎಂದರು.ಅನೇಕ ದೇಶಗಳು ಸ್ವಲ್ಪ ಪ್ರಗತಿ ಸಾಧಿಸಿದ್ದರೂ, ಜಾಗತಿಕವಾಗಿ ಸಾಂಕ್ರಾಮಿಕ ರೋಗವು ವೇಗವನ್ನು ಹೆಚ್ಚಿಸುತ್ತಿದೆ ಎನ್ನುವುದನ್ನು ಗಮನಿಸಬೇಕು ಎಂದರು. ಇಲ್ಲಿ ರಾಷ್ಟ್ರೀಯ ಏಕತೆಯ ಕೊರತೆ ಮತ್ತು ಜಾಗತಿಕ ಒಗ್ಗಟ್ಟಿನ ಕೊರತೆ ಎದ್ದು ಕಾಣುತ್ತಿದೆ ಎಂದ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಜರ್ಮನಿ, ದಕ್ಷಿಣ ಕೊರಿಯಾ ಮತ್ತು ಜಪಾನ್ನ ಉದಾಹರಣೆಗಳನ್ನು ಅನುಸರಿಸಲು ಎಲ್ಲರೂ ಗಮನಹರಿಸಬೇಕು ಎಂದರು.
( Source:REUTERS )
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…