ಕೊರೋನಾ ವೈರಸ್ (ಕೋವಿಡ್ -19) ಸಾಂಕ್ರಾಮಿಕ ರೋಗ ಇಲ್ಲಿಗೇ ಮುಗಿಯುತ್ತಿಲ್ಲ. ಇದರ ಭೀಕರತೆ ಇನ್ನು ಬರಬೇಕಿದೆ. ಸರ್ಕಾರಗಳು ಸರಿಯಾದ ಕ್ರಮಗಳನ್ನು ಜಾರಿಗೆ ತರಲು ಈಗಲೂ ಪ್ರಾರಂಭಿಸದಿದ್ದರೆ ವೈರಸ್ ಇನ್ನೂ ಅನೇಕ ಜನರಿಗೆ ತಗಲುತ್ತದೆ ಎಂದು ಡಬ್ಲ್ಯುಎಚ್ಒ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಹೇಳಿದ್ದಾರೆ.
ಕೊರೋನಾ ವೈರಸ್ ಹರಡಲು ಪ್ರಾರಂಭವಾದ ಆರು ತಿಂಗಳ ನಂತರ ವಿಶ್ವ ಆರೋಗ್ಯ ಸಂಸ್ಥೆ ಮತ್ತೊಮ್ಮೆ ಎಚ್ಚರಿಸಿದೆ. ಕೊರೋನಾ ಬಗ್ಗೆ ಮಾತನಾಡಿದ ಡಬ್ಲ್ಯುಎಚ್ಒ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಇದುವರೆಗೆ ಕೊರೋನಾ ಟೆಸ್ಟಿಂಗ್, ಟ್ರೇಸಿಂಗ್ ಹಾಗೂ ಐಸೋಲೇಶನ್, ಕ್ವಾರಂಟೈನ್ ನಲ್ಲಿಯೇ ಕೊರೋನಾ ವೈರಸ್ ತಡೆಯ ಹಂತದಲ್ಲೇ ಉಳಿದಿದೆ. ಅದಕ್ಕಿಂತ ದಾಟಿ ಮುಂದೆ ಸಾಗಬೇಕಿದೆ. ಏಕೆಂದರೆ “ಕೊರೋನಾ ವೈರಸ್ ಕೊನೆಗೊಂಡಿಲ್ಲ, ಇನ್ನಷ್ಟೇ ಗಂಭೀರ ಹಂತ ತಲುಪಲಿದೆ ಎಂದು ಹೇಳಲು ನನಗೆ ವಿಷಾದವಿದೆ. ನಾವು ಈಗಾಗಲೇ ಬಹಳಷ್ಟು ಕಳೆದುಕೊಂಡಿದ್ದೇವೆ. ಇದಕ್ಕಿಂತಲೂ ಕೆಟ್ಟ ಪರಿಸ್ಥಿತಿ ಮುಂದೆ ಬರಲಿದೆ ಎನ್ನುವುದಕ್ಕೆ ವೇದನೆಯಾಗುತ್ತದೆ ಎಂದರು.
ಈಗಾಗಲೇ ಸಾವನ್ನಪ್ಪಿದ ರೋಗಿಗಳ ಸಂಖ್ಯೆ ಈಗ 5,00,000 ಕ್ಕಿಂತ ಹೆಚ್ಚಾಗಿದೆ. ವಿಶ್ವದ ಅರ್ಧದಷ್ಟು ಪ್ರಕರಣಗಳು ಯುಎಸ್ ಮತ್ತು ಯುರೋಪಿನಲ್ಲಿವೆ ಆದರೆ ಕೋವಿಡ್ -19 ಅಮೆರಿಕದಲ್ಲಿ ಈಗ ವೇಗವಾಗಿ ಬೆಳೆಯುತ್ತಿದೆ. ದಕ್ಷಿಣ ಏಷ್ಯಾ ಮತ್ತು ಆಫ್ರಿಕಾದ ಮೇಲೂ ಪರಿಣಾಮ ಬೀರುತ್ತಿದೆ, ಅಲ್ಲಿ ಜುಲೈ ಅಂತ್ಯದವರೆಗೆ ಇದು ಕಡಿಮೆಯಾಗುವ ನಿರೀಕ್ಷೆ ಇಲ್ಲ ಎಂದ ಅಧಾನೊಮ್ ಘೆಬ್ರೆಯೆಸಸ್ ನಾವೆಲ್ಲರೂ ಇದು ಮುಗಿಯಬೇಕೆಂದು ಬಯಸುತ್ತೇವೆ, ನಾವೆಲ್ಲರೂ ನಮ್ಮ ಸುಂದರ ಜೀವನವನ್ನು ಮುಂದುವರಿಸಲು ಬಯಸುತ್ತೇವೆ. ಆದರೆ ಕಠಿಣ ವಾಸ್ತವವೆಂದರೆ ಇದು ಮುಗಿಯುವುದು ದೂರದಲ್ಲಿದೆ ಎಂದರು.ಅನೇಕ ದೇಶಗಳು ಸ್ವಲ್ಪ ಪ್ರಗತಿ ಸಾಧಿಸಿದ್ದರೂ, ಜಾಗತಿಕವಾಗಿ ಸಾಂಕ್ರಾಮಿಕ ರೋಗವು ವೇಗವನ್ನು ಹೆಚ್ಚಿಸುತ್ತಿದೆ ಎನ್ನುವುದನ್ನು ಗಮನಿಸಬೇಕು ಎಂದರು. ಇಲ್ಲಿ ರಾಷ್ಟ್ರೀಯ ಏಕತೆಯ ಕೊರತೆ ಮತ್ತು ಜಾಗತಿಕ ಒಗ್ಗಟ್ಟಿನ ಕೊರತೆ ಎದ್ದು ಕಾಣುತ್ತಿದೆ ಎಂದ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಜರ್ಮನಿ, ದಕ್ಷಿಣ ಕೊರಿಯಾ ಮತ್ತು ಜಪಾನ್ನ ಉದಾಹರಣೆಗಳನ್ನು ಅನುಸರಿಸಲು ಎಲ್ಲರೂ ಗಮನಹರಿಸಬೇಕು ಎಂದರು.
( Source:REUTERS )
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…