Advertisement
ರಾಷ್ಟ್ರೀಯ

ಕೊರೋನಾ ಭೀಕರತೆ ಇನ್ನಷ್ಟೇ ಬರಬೇಕಿದೆ | ಇನ್ನಷ್ಟು ಕ್ರಮಗಳು ಆಗಬೇಕಿದೆ | ವಿಶ್ವ ಆರೋಗ್ಯ ಸಂಸ್ಥೆ ನೀಡಿದ ಎಚ್ಚರಿಕೆ

Share

ಕೊರೋನಾ ವೈರಸ್ (ಕೋವಿಡ್ -19) ಸಾಂಕ್ರಾಮಿಕ ರೋಗ ಇಲ್ಲಿಗೇ ಮುಗಿಯುತ್ತಿಲ್ಲ. ಇದರ ಭೀಕರತೆ ಇನ್ನು ಬರಬೇಕಿದೆ. ಸರ್ಕಾರಗಳು ಸರಿಯಾದ ಕ್ರಮಗಳನ್ನು ಜಾರಿಗೆ ತರಲು ಈಗಲೂ ಪ್ರಾರಂಭಿಸದಿದ್ದರೆ ವೈರಸ್ ಇನ್ನೂ ಅನೇಕ ಜನರಿಗೆ ತಗಲುತ್ತದೆ ಎಂದು ಡಬ್ಲ್ಯುಎಚ್‌ಒ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಹೇಳಿದ್ದಾರೆ.

ಕೊರೋನಾ ವೈರಸ್ ಹರಡಲು ಪ್ರಾರಂಭವಾದ ಆರು ತಿಂಗಳ ನಂತರ ವಿಶ್ವ ಆರೋಗ್ಯ ಸಂಸ್ಥೆ ಮತ್ತೊಮ್ಮೆ ಎಚ್ಚರಿಸಿದೆ.  ಕೊರೋನಾ ಬಗ್ಗೆ  ಮಾತನಾಡಿದ ಡಬ್ಲ್ಯುಎಚ್‌ಒ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಇದುವರೆಗೆ ಕೊರೋನಾ ಟೆಸ್ಟಿಂಗ್, ಟ್ರೇಸಿಂಗ್ ಹಾಗೂ ಐಸೋಲೇಶನ್, ಕ್ವಾರಂಟೈನ್ ನಲ್ಲಿಯೇ ಕೊರೋನಾ ವೈರಸ್ ತಡೆಯ ಹಂತದಲ್ಲೇ ಉಳಿದಿದೆ. ಅದಕ್ಕಿಂತ ದಾಟಿ ಮುಂದೆ ಸಾಗಬೇಕಿದೆ. ಏಕೆಂದರೆ  “ಕೊರೋನಾ ವೈರಸ್ ಕೊನೆಗೊಂಡಿಲ್ಲ, ಇನ್ನಷ್ಟೇ ಗಂಭೀರ ಹಂತ ತಲುಪಲಿದೆ ಎಂದು ಹೇಳಲು ನನಗೆ ವಿಷಾದವಿದೆ. ನಾವು ಈಗಾಗಲೇ ಬಹಳಷ್ಟು ಕಳೆದುಕೊಂಡಿದ್ದೇವೆ. ಇದಕ್ಕಿಂತಲೂ ಕೆಟ್ಟ ಪರಿಸ್ಥಿತಿ ಮುಂದೆ ಬರಲಿದೆ ಎನ್ನುವುದಕ್ಕೆ ವೇದನೆಯಾಗುತ್ತದೆ ಎಂದರು.

ಈಗಾಗಲೇ ಸಾವನ್ನಪ್ಪಿದ ರೋಗಿಗಳ ಸಂಖ್ಯೆ ಈಗ 5,00,000 ಕ್ಕಿಂತ ಹೆಚ್ಚಾಗಿದೆ. ವಿಶ್ವದ ಅರ್ಧದಷ್ಟು ಪ್ರಕರಣಗಳು ಯುಎಸ್ ಮತ್ತು ಯುರೋಪಿನಲ್ಲಿವೆ ಆದರೆ ಕೋವಿಡ್ -19 ಅಮೆರಿಕದಲ್ಲಿ ಈಗ ವೇಗವಾಗಿ ಬೆಳೆಯುತ್ತಿದೆ. ದಕ್ಷಿಣ ಏಷ್ಯಾ ಮತ್ತು ಆಫ್ರಿಕಾದ ಮೇಲೂ ಪರಿಣಾಮ ಬೀರುತ್ತಿದೆ, ಅಲ್ಲಿ ಜುಲೈ ಅಂತ್ಯದವರೆಗೆ ಇದು ಕಡಿಮೆಯಾಗುವ ನಿರೀಕ್ಷೆ ಇಲ್ಲ ಎಂದ ಅಧಾನೊಮ್ ಘೆಬ್ರೆಯೆಸಸ್  ನಾವೆಲ್ಲರೂ ಇದು ಮುಗಿಯಬೇಕೆಂದು ಬಯಸುತ್ತೇವೆ, ನಾವೆಲ್ಲರೂ ನಮ್ಮ ಸುಂದರ ಜೀವನವನ್ನು ಮುಂದುವರಿಸಲು ಬಯಸುತ್ತೇವೆ. ಆದರೆ ಕಠಿಣ ವಾಸ್ತವವೆಂದರೆ ಇದು ಮುಗಿಯುವುದು ದೂರದಲ್ಲಿದೆ ಎಂದರು.ಅನೇಕ ದೇಶಗಳು ಸ್ವಲ್ಪ ಪ್ರಗತಿ ಸಾಧಿಸಿದ್ದರೂ, ಜಾಗತಿಕವಾಗಿ ಸಾಂಕ್ರಾಮಿಕ ರೋಗವು ವೇಗವನ್ನು ಹೆಚ್ಚಿಸುತ್ತಿದೆ ಎನ್ನುವುದನ್ನು ಗಮನಿಸಬೇಕು ಎಂದರು. ಇಲ್ಲಿ ರಾಷ್ಟ್ರೀಯ ಏಕತೆಯ ಕೊರತೆ ಮತ್ತು ಜಾಗತಿಕ ಒಗ್ಗಟ್ಟಿನ ಕೊರತೆ ಎದ್ದು ಕಾಣುತ್ತಿದೆ ಎಂದ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್,  ಜರ್ಮನಿ, ದಕ್ಷಿಣ ಕೊರಿಯಾ ಮತ್ತು ಜಪಾನ್‌ನ ಉದಾಹರಣೆಗಳನ್ನು ಅನುಸರಿಸಲು ಎಲ್ಲರೂ ಗಮನಹರಿಸಬೇಕು ಎಂದರು.

( Source:REUTERS )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

11 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

18 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago