ಬೆಂಗಳೂರು: ಕೊರೋನಾ ಸೋಂಕು ಭೀತಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 1ನೇ ತರಗತಿಯಿಂದ 9ನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ 1ರಿಂದ ಆರನೇ ತರಗತಿಯ ಮಕ್ಕಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲು ಸೂಚಿಸಿದ್ದರು. ಇದೀಗ ಏಳು ಮತ್ತು ಎಂಟನೇ ತರಗತಿಗೆ ಕೂಡಾ ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಇನ್ನು ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ರೂಪಣಾತ್ಮಕ ಹಾಗೂ ಸಂಕಲನಾತ್ಮಕ ಪರೀಕ್ಷೆಗಳು ನಡೆದಿದ್ದು ಇದರ ಆಧಾರದ ಮೇಲೆ 10ನೇ ತರಗತಿಗೆ ಪಾಸ್ ಮಾಡಲಾಗುವುದು. ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ಏ.14ರ ನಂತರ ಪರಿಸ್ಥಿತಿ ಅವಲೋಕಿಸಿ, ಮಕ್ಕಳಿಗೆ ಸಮಯಾವಕಾಶ ನೀಡಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…