ಕೊರೋನಾ ವೈರಸ್ ಮುಂಜಾಗ್ರತೆ | ಗುತ್ತಿಗಾರು ಸಹಕಾರಿ ಸಂಘದಲ್ಲಿ ಮಾದರಿ ವ್ಯವಸ್ಥೆ

July 2, 2020
4:55 PM

ಗುತ್ತಿಗಾರು: ಕೊರೋನಾ ವೈರಸ್ ಇದೀಗ ದ ಕ ಜಿಲ್ಲೆಯ ವಿವಿದೆಡೆ ಹರಡುತ್ತಿದೆ. ಸುಳ್ಯ ತಾಲೂಕಿನ ಅಲ್ಲಲ್ಲಿ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಾದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ  ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ  ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮಗಳಿಗೆ ಮಾದರಿ ವ್ಯವಸ್ಥೆ ಕೈಗೊಳ್ಳಲಾಗಿದೆ.

ಸಹಕಾರಿ ಸಂಘಕ್ಕೆ ವಿವಿಧ ಕೆಲಸಗಳಿಗೆ ಸಾರ್ವಜನಿಕರು ಆಗಮಿಸುತ್ತಿದ್ದಾರೆ. ಈ ಸಂದರ್ಭ ಸಿಬಂದಿಗಳೂ ಆತಂಕ ಇದೆ, ಸಾರ್ವಜನಿಕರಿಗೂ ಸುರಕ್ಷತೆ ಅಗತ್ಯವಾಗಿದೆ. ಈ ಕಾರಣದಿಂದ ಸಹಕಾರಿ ಸಂಘದ ಒಳಗೆ ತೆರಳುವ ಮುನ್ನ ದೇಹದ ಉಷ್ಣತೆ ಪರೀಕ್ಷೆ, ಸ್ಯಾನಿಟೈಸರ್ ಬಳಕೆ ಹಾಗೂ ಮಾಸ್ಕ್ ಅಳವಡಿಕೆ ಕಡ್ಡಾಯ ಅಳವಡಿಕೆಗೆ ಸೂಚಿಸಿ ಸಹಕಾರಿ ಸಂಘಕ್ಕೆ ಆಗಮಿಸಿದ ವ್ಯಕ್ತಿಗಳ ಹೆಸರು ಹಾಗೂ ಮೊಬೈಲ್ ದಾಖಲಿಸಿ ಒಳಬಿಡಲಾಗುತ್ತಿದೆ. ಸಹಕಾರಿ ಸಂಘದ ಒಳಗೆ ಸಾಮಾಜಿಕ ಅಂತರಕ್ಕೂ ವ್ಯವಸ್ಥೆ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಈಗ ಇಂತಹ ವ್ಯವಸ್ಥೆ ಅಗತ್ಯವಾಗಿದೆ. ಎಲ್ಲೆಡೆ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ.

ಸಮುದಾಯದ ಹಿತದೃಷ್ಟಿಯಿಂದ ಹಾಗೂ ಸಾಮಾಜಿಕ ಕಾಳಜಿಯಿಂದ ಸಹಕಾರಿ ಸಂಘದಲ್ಲಿ  ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ . – ವೆಂಕಟ್ ದಂಬೆಕೋಡಿ, ಅಧ್ಯಕ್ಷರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಗುತ್ತಿಗಾರು

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು
July 6, 2026
9:10 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್
July 6, 2026
8:41 PM
by: ದ ರೂರಲ್ ಮಿರರ್.ಕಾಂ
E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?
July 6, 2026
3:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ
July 6, 2026
3:08 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror