ಗುತ್ತಿಗಾರು: ಕೊರೋನಾ ವೈರಸ್ ಇದೀಗ ದ ಕ ಜಿಲ್ಲೆಯ ವಿವಿದೆಡೆ ಹರಡುತ್ತಿದೆ. ಸುಳ್ಯ ತಾಲೂಕಿನ ಅಲ್ಲಲ್ಲಿ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಾದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮಗಳಿಗೆ ಮಾದರಿ ವ್ಯವಸ್ಥೆ ಕೈಗೊಳ್ಳಲಾಗಿದೆ.
ಸಹಕಾರಿ ಸಂಘಕ್ಕೆ ವಿವಿಧ ಕೆಲಸಗಳಿಗೆ ಸಾರ್ವಜನಿಕರು ಆಗಮಿಸುತ್ತಿದ್ದಾರೆ. ಈ ಸಂದರ್ಭ ಸಿಬಂದಿಗಳೂ ಆತಂಕ ಇದೆ, ಸಾರ್ವಜನಿಕರಿಗೂ ಸುರಕ್ಷತೆ ಅಗತ್ಯವಾಗಿದೆ. ಈ ಕಾರಣದಿಂದ ಸಹಕಾರಿ ಸಂಘದ ಒಳಗೆ ತೆರಳುವ ಮುನ್ನ ದೇಹದ ಉಷ್ಣತೆ ಪರೀಕ್ಷೆ, ಸ್ಯಾನಿಟೈಸರ್ ಬಳಕೆ ಹಾಗೂ ಮಾಸ್ಕ್ ಅಳವಡಿಕೆ ಕಡ್ಡಾಯ ಅಳವಡಿಕೆಗೆ ಸೂಚಿಸಿ ಸಹಕಾರಿ ಸಂಘಕ್ಕೆ ಆಗಮಿಸಿದ ವ್ಯಕ್ತಿಗಳ ಹೆಸರು ಹಾಗೂ ಮೊಬೈಲ್ ದಾಖಲಿಸಿ ಒಳಬಿಡಲಾಗುತ್ತಿದೆ. ಸಹಕಾರಿ ಸಂಘದ ಒಳಗೆ ಸಾಮಾಜಿಕ ಅಂತರಕ್ಕೂ ವ್ಯವಸ್ಥೆ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಈಗ ಇಂತಹ ವ್ಯವಸ್ಥೆ ಅಗತ್ಯವಾಗಿದೆ. ಎಲ್ಲೆಡೆ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ.
ಸಮುದಾಯದ ಹಿತದೃಷ್ಟಿಯಿಂದ ಹಾಗೂ ಸಾಮಾಜಿಕ ಕಾಳಜಿಯಿಂದ ಸಹಕಾರಿ ಸಂಘದಲ್ಲಿ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ . – ವೆಂಕಟ್ ದಂಬೆಕೋಡಿ, ಅಧ್ಯಕ್ಷರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಗುತ್ತಿಗಾರು
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…