ಗುತ್ತಿಗಾರು: ಕೊರೋನಾ ವೈರಸ್ ಇದೀಗ ದ ಕ ಜಿಲ್ಲೆಯ ವಿವಿದೆಡೆ ಹರಡುತ್ತಿದೆ. ಸುಳ್ಯ ತಾಲೂಕಿನ ಅಲ್ಲಲ್ಲಿ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಾದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮಗಳಿಗೆ ಮಾದರಿ ವ್ಯವಸ್ಥೆ ಕೈಗೊಳ್ಳಲಾಗಿದೆ.
ಸಹಕಾರಿ ಸಂಘಕ್ಕೆ ವಿವಿಧ ಕೆಲಸಗಳಿಗೆ ಸಾರ್ವಜನಿಕರು ಆಗಮಿಸುತ್ತಿದ್ದಾರೆ. ಈ ಸಂದರ್ಭ ಸಿಬಂದಿಗಳೂ ಆತಂಕ ಇದೆ, ಸಾರ್ವಜನಿಕರಿಗೂ ಸುರಕ್ಷತೆ ಅಗತ್ಯವಾಗಿದೆ. ಈ ಕಾರಣದಿಂದ ಸಹಕಾರಿ ಸಂಘದ ಒಳಗೆ ತೆರಳುವ ಮುನ್ನ ದೇಹದ ಉಷ್ಣತೆ ಪರೀಕ್ಷೆ, ಸ್ಯಾನಿಟೈಸರ್ ಬಳಕೆ ಹಾಗೂ ಮಾಸ್ಕ್ ಅಳವಡಿಕೆ ಕಡ್ಡಾಯ ಅಳವಡಿಕೆಗೆ ಸೂಚಿಸಿ ಸಹಕಾರಿ ಸಂಘಕ್ಕೆ ಆಗಮಿಸಿದ ವ್ಯಕ್ತಿಗಳ ಹೆಸರು ಹಾಗೂ ಮೊಬೈಲ್ ದಾಖಲಿಸಿ ಒಳಬಿಡಲಾಗುತ್ತಿದೆ. ಸಹಕಾರಿ ಸಂಘದ ಒಳಗೆ ಸಾಮಾಜಿಕ ಅಂತರಕ್ಕೂ ವ್ಯವಸ್ಥೆ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಈಗ ಇಂತಹ ವ್ಯವಸ್ಥೆ ಅಗತ್ಯವಾಗಿದೆ. ಎಲ್ಲೆಡೆ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ.
ಸಮುದಾಯದ ಹಿತದೃಷ್ಟಿಯಿಂದ ಹಾಗೂ ಸಾಮಾಜಿಕ ಕಾಳಜಿಯಿಂದ ಸಹಕಾರಿ ಸಂಘದಲ್ಲಿ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ . – ವೆಂಕಟ್ ದಂಬೆಕೋಡಿ, ಅಧ್ಯಕ್ಷರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಗುತ್ತಿಗಾರು
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…