ಸುದ್ದಿಗಳು

ಕೊರೋನಾ ವೈರಸ್-ಲಾಕ್ ಡೌನ್ | ಎಸ್.ಎಸ್.ಎಫ್- ಎಸ್.ವೈ.ಎಸ್ ಸುಳ್ಯ ವತಿಯಿಂದ ಸೇವೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕೊರೋನಾ ವೈರಸ್ ಸೋಂಕಿಗೆ ಇಡೀ ಜಗತ್ತೇ ತತ್ತರಿಸಿ, ಲಾಕ್ ಡೌನ್ ಸ್ಥಿತಿಯಲ್ಲಿರುವಾಗ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಎಸ್.ಎಸ್ ಎಫ್ ಮತ್ತು ಎಸ್.ವೈ.ಎಸ್ ತಂಡಗಳು ತುರ್ತುಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದೆ.

Advertisement

ಬಡ ನಿರ್ಗತಿಕರಿಗೆ ಅನ್ನಾಹಾರ ತಲುಪಿಸುವುದು, ಅನಾರೋಗ್ಯ ಪೀಡಿತರಿಗೆ ಔಷಧಗಳನ್ನು ತಲುಪಿಸಿ, ಅತ್ಯಗತ್ಯ ಸಂದರ್ಭಗಳಲ್ಲಿ ಆಂಬುಲೆನ್ಸ್ ವ್ಯವಸ್ಥೆ ಮಾಡಿ ಆಸ್ಪತ್ರೆಗಳಿಗೆ ತಲುಪಿಸುವ ವ್ಯವಸ್ಥೆ ಮಾಡುವುದು, ರಕ್ತದ ಬೇಡಿಕೆಯನ್ನು ಮನಗಂಡು ರಕ್ತದಾನ ಮಾಡುವ ವ್ಯವಸ್ಥೆ, ಲಾಕ್ ಡೌನ್ ನ ವೇಳೆಯಲ್ಲಿ ಅರ್ಧದಾರಿಯಲ್ಲಿ ಸಿಲುಕಿದವರನ್ನು ಸುರಕ್ಷಿತ ಸ್ಥಳಗಳಿಗೆ ತಲುಪಿಸುವುದು, ಕೊರೋನಾ ಮಾರಕ ವೈರಸಿನ ಬಗ್ಗೆ ವಿವಿಧೆಡೆಗಳಲ್ಲಿ ಜಾಗೃತಿ ಮೂಡಿಸುವುದು ಸಹಿತ ಹತ್ತು ಹಲವು ತುರ್ತು ಸೇವೆಗಳಲ್ಲಿ ತಂಡವು ಕಳೆದ ಹತ್ತಾರು ದಿನಗಳಿಂದ ತೊಡಗಿಸಿಕೊಂಡಿರುವುದಕ್ಕೆ  ಶ್ಲಾಘನೆಯ ಮಾತುಗಳು ಕೇಳಿಬರುತ್ತಿದೆ.

ಮಂಗಳೂರಿನ ಆಸ್ಪತ್ರೆಗಳಲ್ಲಿ ರಕ್ತದ ಕೊರತೆಯಿದೆಯೆಂದರಿತು ಸುಮಾರು ಇಪ್ಪತ್ತರಷ್ಟು ಬ್ಲಡ್ ಸೈಬೋ ಕಾರ್ಯಕರ್ತರು ಮಂಗಳೂರಿಗೆ ತೆರಳಿ ರಕ್ತದಾನವನ್ನು ಮಾಡಿದ್ದಾರೆ. ರಾಜ್ಯ ಹಾಗೂ ಜಿಲ್ಲಾ ನಾಯಕರ ನಿರ್ದೇಶನಗಳನ್ನು ಪಡೆದು ಸರಕಾರ ಹಾಗೂ ಆರೋಗ್ಯ ಇಲಾಖೆಯ ಸುತ್ತೋಲೆಗಳನ್ನು ಪಾಲಿಸಿ ಸ್ವಯಂ ರಕ್ಷಣೆಯೊಂದಿಗೆ ಉಳಿದವರ ಅತ್ಯಗತ್ಯಗಳ ಪೂರೈಕೆಗೂ ಎಸ್.ಎಸ್.ಎಫ್, ಎಸ್.ವೈ.ಎಸ್ ತಂಡವು ನಿರಂತರವಾಗಿ ಶ್ರಮ ವಹಿಸುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರೇಮ ಸಂಬಂಧದಲ್ಲಿ ಈ ರಾಶಿಯವರಿಗೆ ವಿಶ್ವಾಸದ ಕೊರತೆಯ ಸಮಸ್ಯೆ

ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…

8 minutes ago

ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯ ಹೊಸ ಮಾದರಿಯ 6 ಕಾರು ಧರ್ಮಸ್ಥಳಕ್ಕೆ ಕೊಡುಗೆ

ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…

20 minutes ago

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ

ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…

20 hours ago

ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌

ಹಲಸಿನ ಬೇಳೆ ಸೂಪ್‌ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…

23 hours ago

ಬದುಕು ಪುರಾಣ | ಬದುಕಿಗಾಸರೆ, ಕಾಮಧೇನು

ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…

24 hours ago

ಪ್ರೇಮ ವಿಚಾರದಲ್ಲಿ ಈ ರಾಶಿಯವರಿಗೆ ಭಾವನಾತ್ಮಕ ಏರಿಳಿತ

ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…

24 hours ago