ಸುದ್ದಿಗಳು

ಕೊರೋನಾ ವೈರಸ್-ಲಾಕ್ ಡೌನ್ | ಎಸ್.ಎಸ್.ಎಫ್- ಎಸ್.ವೈ.ಎಸ್ ಸುಳ್ಯ ವತಿಯಿಂದ ಸೇವೆ

Share

ಸುಳ್ಯ: ಕೊರೋನಾ ವೈರಸ್ ಸೋಂಕಿಗೆ ಇಡೀ ಜಗತ್ತೇ ತತ್ತರಿಸಿ, ಲಾಕ್ ಡೌನ್ ಸ್ಥಿತಿಯಲ್ಲಿರುವಾಗ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಎಸ್.ಎಸ್ ಎಫ್ ಮತ್ತು ಎಸ್.ವೈ.ಎಸ್ ತಂಡಗಳು ತುರ್ತುಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದೆ.

ಬಡ ನಿರ್ಗತಿಕರಿಗೆ ಅನ್ನಾಹಾರ ತಲುಪಿಸುವುದು, ಅನಾರೋಗ್ಯ ಪೀಡಿತರಿಗೆ ಔಷಧಗಳನ್ನು ತಲುಪಿಸಿ, ಅತ್ಯಗತ್ಯ ಸಂದರ್ಭಗಳಲ್ಲಿ ಆಂಬುಲೆನ್ಸ್ ವ್ಯವಸ್ಥೆ ಮಾಡಿ ಆಸ್ಪತ್ರೆಗಳಿಗೆ ತಲುಪಿಸುವ ವ್ಯವಸ್ಥೆ ಮಾಡುವುದು, ರಕ್ತದ ಬೇಡಿಕೆಯನ್ನು ಮನಗಂಡು ರಕ್ತದಾನ ಮಾಡುವ ವ್ಯವಸ್ಥೆ, ಲಾಕ್ ಡೌನ್ ನ ವೇಳೆಯಲ್ಲಿ ಅರ್ಧದಾರಿಯಲ್ಲಿ ಸಿಲುಕಿದವರನ್ನು ಸುರಕ್ಷಿತ ಸ್ಥಳಗಳಿಗೆ ತಲುಪಿಸುವುದು, ಕೊರೋನಾ ಮಾರಕ ವೈರಸಿನ ಬಗ್ಗೆ ವಿವಿಧೆಡೆಗಳಲ್ಲಿ ಜಾಗೃತಿ ಮೂಡಿಸುವುದು ಸಹಿತ ಹತ್ತು ಹಲವು ತುರ್ತು ಸೇವೆಗಳಲ್ಲಿ ತಂಡವು ಕಳೆದ ಹತ್ತಾರು ದಿನಗಳಿಂದ ತೊಡಗಿಸಿಕೊಂಡಿರುವುದಕ್ಕೆ  ಶ್ಲಾಘನೆಯ ಮಾತುಗಳು ಕೇಳಿಬರುತ್ತಿದೆ.

ಮಂಗಳೂರಿನ ಆಸ್ಪತ್ರೆಗಳಲ್ಲಿ ರಕ್ತದ ಕೊರತೆಯಿದೆಯೆಂದರಿತು ಸುಮಾರು ಇಪ್ಪತ್ತರಷ್ಟು ಬ್ಲಡ್ ಸೈಬೋ ಕಾರ್ಯಕರ್ತರು ಮಂಗಳೂರಿಗೆ ತೆರಳಿ ರಕ್ತದಾನವನ್ನು ಮಾಡಿದ್ದಾರೆ. ರಾಜ್ಯ ಹಾಗೂ ಜಿಲ್ಲಾ ನಾಯಕರ ನಿರ್ದೇಶನಗಳನ್ನು ಪಡೆದು ಸರಕಾರ ಹಾಗೂ ಆರೋಗ್ಯ ಇಲಾಖೆಯ ಸುತ್ತೋಲೆಗಳನ್ನು ಪಾಲಿಸಿ ಸ್ವಯಂ ರಕ್ಷಣೆಯೊಂದಿಗೆ ಉಳಿದವರ ಅತ್ಯಗತ್ಯಗಳ ಪೂರೈಕೆಗೂ ಎಸ್.ಎಸ್.ಎಫ್, ಎಸ್.ವೈ.ಎಸ್ ತಂಡವು ನಿರಂತರವಾಗಿ ಶ್ರಮ ವಹಿಸುತ್ತಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

19 seconds ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

1 hour ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

1 hour ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

2 hours ago

ಎಫ್‌ಪಿಒ ಗಳಿಗೆ ರಾಜ್ಯ ಸರ್ಕಾರದಿಂದ ನೆರವು

ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…

2 hours ago

ಜಾನುವಾರು ಗಣತಿ | ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ | 2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ |

21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…

2 hours ago