ಸುಳ್ಯ: ಕೊರೋನಾ ವೈರಸ್ ಸೋಂಕಿಗೆ ಇಡೀ ಜಗತ್ತೇ ತತ್ತರಿಸಿ, ಲಾಕ್ ಡೌನ್ ಸ್ಥಿತಿಯಲ್ಲಿರುವಾಗ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಎಸ್.ಎಸ್ ಎಫ್ ಮತ್ತು ಎಸ್.ವೈ.ಎಸ್ ತಂಡಗಳು ತುರ್ತುಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದೆ.
ಬಡ ನಿರ್ಗತಿಕರಿಗೆ ಅನ್ನಾಹಾರ ತಲುಪಿಸುವುದು, ಅನಾರೋಗ್ಯ ಪೀಡಿತರಿಗೆ ಔಷಧಗಳನ್ನು ತಲುಪಿಸಿ, ಅತ್ಯಗತ್ಯ ಸಂದರ್ಭಗಳಲ್ಲಿ ಆಂಬುಲೆನ್ಸ್ ವ್ಯವಸ್ಥೆ ಮಾಡಿ ಆಸ್ಪತ್ರೆಗಳಿಗೆ ತಲುಪಿಸುವ ವ್ಯವಸ್ಥೆ ಮಾಡುವುದು, ರಕ್ತದ ಬೇಡಿಕೆಯನ್ನು ಮನಗಂಡು ರಕ್ತದಾನ ಮಾಡುವ ವ್ಯವಸ್ಥೆ, ಲಾಕ್ ಡೌನ್ ನ ವೇಳೆಯಲ್ಲಿ ಅರ್ಧದಾರಿಯಲ್ಲಿ ಸಿಲುಕಿದವರನ್ನು ಸುರಕ್ಷಿತ ಸ್ಥಳಗಳಿಗೆ ತಲುಪಿಸುವುದು, ಕೊರೋನಾ ಮಾರಕ ವೈರಸಿನ ಬಗ್ಗೆ ವಿವಿಧೆಡೆಗಳಲ್ಲಿ ಜಾಗೃತಿ ಮೂಡಿಸುವುದು ಸಹಿತ ಹತ್ತು ಹಲವು ತುರ್ತು ಸೇವೆಗಳಲ್ಲಿ ತಂಡವು ಕಳೆದ ಹತ್ತಾರು ದಿನಗಳಿಂದ ತೊಡಗಿಸಿಕೊಂಡಿರುವುದಕ್ಕೆ ಶ್ಲಾಘನೆಯ ಮಾತುಗಳು ಕೇಳಿಬರುತ್ತಿದೆ.
ಮಂಗಳೂರಿನ ಆಸ್ಪತ್ರೆಗಳಲ್ಲಿ ರಕ್ತದ ಕೊರತೆಯಿದೆಯೆಂದರಿತು ಸುಮಾರು ಇಪ್ಪತ್ತರಷ್ಟು ಬ್ಲಡ್ ಸೈಬೋ ಕಾರ್ಯಕರ್ತರು ಮಂಗಳೂರಿಗೆ ತೆರಳಿ ರಕ್ತದಾನವನ್ನು ಮಾಡಿದ್ದಾರೆ. ರಾಜ್ಯ ಹಾಗೂ ಜಿಲ್ಲಾ ನಾಯಕರ ನಿರ್ದೇಶನಗಳನ್ನು ಪಡೆದು ಸರಕಾರ ಹಾಗೂ ಆರೋಗ್ಯ ಇಲಾಖೆಯ ಸುತ್ತೋಲೆಗಳನ್ನು ಪಾಲಿಸಿ ಸ್ವಯಂ ರಕ್ಷಣೆಯೊಂದಿಗೆ ಉಳಿದವರ ಅತ್ಯಗತ್ಯಗಳ ಪೂರೈಕೆಗೂ ಎಸ್.ಎಸ್.ಎಫ್, ಎಸ್.ವೈ.ಎಸ್ ತಂಡವು ನಿರಂತರವಾಗಿ ಶ್ರಮ ವಹಿಸುತ್ತಿದೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…