ಸುಳ್ಯ: ಕೊರೋನಾ ವೈರಸ್ ಸೋಂಕಿಗೆ ಇಡೀ ಜಗತ್ತೇ ತತ್ತರಿಸಿ, ಲಾಕ್ ಡೌನ್ ಸ್ಥಿತಿಯಲ್ಲಿರುವಾಗ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಎಸ್.ಎಸ್ ಎಫ್ ಮತ್ತು ಎಸ್.ವೈ.ಎಸ್ ತಂಡಗಳು ತುರ್ತುಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದೆ.
ಬಡ ನಿರ್ಗತಿಕರಿಗೆ ಅನ್ನಾಹಾರ ತಲುಪಿಸುವುದು, ಅನಾರೋಗ್ಯ ಪೀಡಿತರಿಗೆ ಔಷಧಗಳನ್ನು ತಲುಪಿಸಿ, ಅತ್ಯಗತ್ಯ ಸಂದರ್ಭಗಳಲ್ಲಿ ಆಂಬುಲೆನ್ಸ್ ವ್ಯವಸ್ಥೆ ಮಾಡಿ ಆಸ್ಪತ್ರೆಗಳಿಗೆ ತಲುಪಿಸುವ ವ್ಯವಸ್ಥೆ ಮಾಡುವುದು, ರಕ್ತದ ಬೇಡಿಕೆಯನ್ನು ಮನಗಂಡು ರಕ್ತದಾನ ಮಾಡುವ ವ್ಯವಸ್ಥೆ, ಲಾಕ್ ಡೌನ್ ನ ವೇಳೆಯಲ್ಲಿ ಅರ್ಧದಾರಿಯಲ್ಲಿ ಸಿಲುಕಿದವರನ್ನು ಸುರಕ್ಷಿತ ಸ್ಥಳಗಳಿಗೆ ತಲುಪಿಸುವುದು, ಕೊರೋನಾ ಮಾರಕ ವೈರಸಿನ ಬಗ್ಗೆ ವಿವಿಧೆಡೆಗಳಲ್ಲಿ ಜಾಗೃತಿ ಮೂಡಿಸುವುದು ಸಹಿತ ಹತ್ತು ಹಲವು ತುರ್ತು ಸೇವೆಗಳಲ್ಲಿ ತಂಡವು ಕಳೆದ ಹತ್ತಾರು ದಿನಗಳಿಂದ ತೊಡಗಿಸಿಕೊಂಡಿರುವುದಕ್ಕೆ ಶ್ಲಾಘನೆಯ ಮಾತುಗಳು ಕೇಳಿಬರುತ್ತಿದೆ.
ಮಂಗಳೂರಿನ ಆಸ್ಪತ್ರೆಗಳಲ್ಲಿ ರಕ್ತದ ಕೊರತೆಯಿದೆಯೆಂದರಿತು ಸುಮಾರು ಇಪ್ಪತ್ತರಷ್ಟು ಬ್ಲಡ್ ಸೈಬೋ ಕಾರ್ಯಕರ್ತರು ಮಂಗಳೂರಿಗೆ ತೆರಳಿ ರಕ್ತದಾನವನ್ನು ಮಾಡಿದ್ದಾರೆ. ರಾಜ್ಯ ಹಾಗೂ ಜಿಲ್ಲಾ ನಾಯಕರ ನಿರ್ದೇಶನಗಳನ್ನು ಪಡೆದು ಸರಕಾರ ಹಾಗೂ ಆರೋಗ್ಯ ಇಲಾಖೆಯ ಸುತ್ತೋಲೆಗಳನ್ನು ಪಾಲಿಸಿ ಸ್ವಯಂ ರಕ್ಷಣೆಯೊಂದಿಗೆ ಉಳಿದವರ ಅತ್ಯಗತ್ಯಗಳ ಪೂರೈಕೆಗೂ ಎಸ್.ಎಸ್.ಎಫ್, ಎಸ್.ವೈ.ಎಸ್ ತಂಡವು ನಿರಂತರವಾಗಿ ಶ್ರಮ ವಹಿಸುತ್ತಿದೆ.
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…