ಕೊರೋನಾ ವೈರಸ್ : ಶಾಲಾ ಮಕ್ಕಳ ಪರೀಕ್ಷೆ ಪ್ರಿಪೋನ್

March 9, 2020
11:05 PM

ಬೆಂಗಳೂರು: ಕೊರೋನಾ ವೈರಸ್ ಭೀತಿ ಶಾಲಾ ಮಕ್ಕಳ ಪರೀಕ್ಷೆಗೂ ಅಡ್ಡಿಯಾಗಿದೆ. ಈ ವೈರಸ್ ಹರಡುವ ಭೀತಿ ಇರುವುದರಿಂದ  ಆರೋಗ್ಯ ಇಲಾಖೆಯ ಸೂಚನೆಯ ಮೇರೆಗೆ ಶಿಕ್ಷಣ ಇಲಾಖೆಯು ಶಾಲಾ ಮಕ್ಕಳ ಪರೀಕ್ಷಾ ದಿನದ ವೇಳಾಪಟ್ಟಿಯಲ್ಲಿ ಮಾರ್ಪಾಡುಗೊಳಿಸಿದೆ. ಹೀಗಾಗಿ ನಿಗದಿತ ಸಮಯಕ್ಕಿಂತ ಮೊದಲೇ ಪರೀಕ್ಷೆ ನಡೆಯಲಿದೆ.

Advertisement
Advertisement

ಈಗಾಗಲೇ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಎಲ್ ಕೆಜಿ ಮತ್ತು ಯುಕೆಜಿ ಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ರಾಜ್ಯಾದ್ಯಂತ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಕೊರೋನಾ ವೈರಸ್ ನಿಂದ ಉಂಟಾಗಬಹುದಾದ ಅಪಾಯದಿಂದ ಸಂರಕ್ಷಿಸುವ ನಿಟ್ಟಿನಲ್ಲಿ ಆದಷ್ಟು ಬೇಗನೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಿ ಬೇಸಿಗೆ ರಜೆಯನ್ನು ಘೋಷಿಸಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.

Advertisement

ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 11ರಿಂದ 16ರವರೆಗೆ ಹಾಗೂ 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 23ರೊಳಗೆ ಪೂರ್ಣಗೊಳಿಸಿ ರಜೆ ನೀಡುವಂತೆ ಆದೇಶಿಸಲಾಗಿದೆ.

10ನೇ ತರಗತಿಯ ವಿದ್ಯಾರ್ಥಿಗಳಿಗೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸಿ ನಂತರ ರಜೆ ಘೋಷಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕ ಸಮರ, ಗೆಲುವಿನ ಲೆಕ್ಕಾಚಾರ | ಬಿಜೆಪಿ ಸ್ವತಂತ್ರವಾಗಿಯೇ 350 ಸೀಟು ಗೆಲ್ಲುತ್ತೆ, ತಮಿಳುನಾಡಿನಲ್ಲಿ 5 ಸೀಟು ಖಚಿತ: ಆರ್ಥಿಕ ತಜ್ಞ ಭಲ್ಲಾ ಭವಿಷ್ಯ
April 22, 2024
6:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror