ಬೆಂಗಳೂರು: ಕೊರೋನಾ ವೈರಸ್ ಭೀತಿ ಶಾಲಾ ಮಕ್ಕಳ ಪರೀಕ್ಷೆಗೂ ಅಡ್ಡಿಯಾಗಿದೆ. ಈ ವೈರಸ್ ಹರಡುವ ಭೀತಿ ಇರುವುದರಿಂದ ಆರೋಗ್ಯ ಇಲಾಖೆಯ ಸೂಚನೆಯ ಮೇರೆಗೆ ಶಿಕ್ಷಣ ಇಲಾಖೆಯು ಶಾಲಾ ಮಕ್ಕಳ ಪರೀಕ್ಷಾ ದಿನದ ವೇಳಾಪಟ್ಟಿಯಲ್ಲಿ ಮಾರ್ಪಾಡುಗೊಳಿಸಿದೆ. ಹೀಗಾಗಿ ನಿಗದಿತ ಸಮಯಕ್ಕಿಂತ ಮೊದಲೇ ಪರೀಕ್ಷೆ ನಡೆಯಲಿದೆ.
ಈಗಾಗಲೇ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಎಲ್ ಕೆಜಿ ಮತ್ತು ಯುಕೆಜಿ ಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ರಾಜ್ಯಾದ್ಯಂತ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಕೊರೋನಾ ವೈರಸ್ ನಿಂದ ಉಂಟಾಗಬಹುದಾದ ಅಪಾಯದಿಂದ ಸಂರಕ್ಷಿಸುವ ನಿಟ್ಟಿನಲ್ಲಿ ಆದಷ್ಟು ಬೇಗನೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಿ ಬೇಸಿಗೆ ರಜೆಯನ್ನು ಘೋಷಿಸಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.
ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 11ರಿಂದ 16ರವರೆಗೆ ಹಾಗೂ 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 23ರೊಳಗೆ ಪೂರ್ಣಗೊಳಿಸಿ ರಜೆ ನೀಡುವಂತೆ ಆದೇಶಿಸಲಾಗಿದೆ.
10ನೇ ತರಗತಿಯ ವಿದ್ಯಾರ್ಥಿಗಳಿಗೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸಿ ನಂತರ ರಜೆ ಘೋಷಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…