ಬೆಂಗಳೂರು: ಕೊರೋನಾ ವೈರಸ್ ಭೀತಿ ಶಾಲಾ ಮಕ್ಕಳ ಪರೀಕ್ಷೆಗೂ ಅಡ್ಡಿಯಾಗಿದೆ. ಈ ವೈರಸ್ ಹರಡುವ ಭೀತಿ ಇರುವುದರಿಂದ ಆರೋಗ್ಯ ಇಲಾಖೆಯ ಸೂಚನೆಯ ಮೇರೆಗೆ ಶಿಕ್ಷಣ ಇಲಾಖೆಯು ಶಾಲಾ ಮಕ್ಕಳ ಪರೀಕ್ಷಾ ದಿನದ ವೇಳಾಪಟ್ಟಿಯಲ್ಲಿ ಮಾರ್ಪಾಡುಗೊಳಿಸಿದೆ. ಹೀಗಾಗಿ ನಿಗದಿತ ಸಮಯಕ್ಕಿಂತ ಮೊದಲೇ ಪರೀಕ್ಷೆ ನಡೆಯಲಿದೆ.
ಈಗಾಗಲೇ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಎಲ್ ಕೆಜಿ ಮತ್ತು ಯುಕೆಜಿ ಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ರಾಜ್ಯಾದ್ಯಂತ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಕೊರೋನಾ ವೈರಸ್ ನಿಂದ ಉಂಟಾಗಬಹುದಾದ ಅಪಾಯದಿಂದ ಸಂರಕ್ಷಿಸುವ ನಿಟ್ಟಿನಲ್ಲಿ ಆದಷ್ಟು ಬೇಗನೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಿ ಬೇಸಿಗೆ ರಜೆಯನ್ನು ಘೋಷಿಸಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.
ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 11ರಿಂದ 16ರವರೆಗೆ ಹಾಗೂ 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 23ರೊಳಗೆ ಪೂರ್ಣಗೊಳಿಸಿ ರಜೆ ನೀಡುವಂತೆ ಆದೇಶಿಸಲಾಗಿದೆ.
10ನೇ ತರಗತಿಯ ವಿದ್ಯಾರ್ಥಿಗಳಿಗೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸಿ ನಂತರ ರಜೆ ಘೋಷಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…