ಬೆಂಗಳೂರು: ಕೊರೋನಾ ವೈರಸ್ ಭೀತಿ ಶಾಲಾ ಮಕ್ಕಳ ಪರೀಕ್ಷೆಗೂ ಅಡ್ಡಿಯಾಗಿದೆ. ಈ ವೈರಸ್ ಹರಡುವ ಭೀತಿ ಇರುವುದರಿಂದ ಆರೋಗ್ಯ ಇಲಾಖೆಯ ಸೂಚನೆಯ ಮೇರೆಗೆ ಶಿಕ್ಷಣ ಇಲಾಖೆಯು ಶಾಲಾ ಮಕ್ಕಳ ಪರೀಕ್ಷಾ ದಿನದ ವೇಳಾಪಟ್ಟಿಯಲ್ಲಿ ಮಾರ್ಪಾಡುಗೊಳಿಸಿದೆ. ಹೀಗಾಗಿ ನಿಗದಿತ ಸಮಯಕ್ಕಿಂತ ಮೊದಲೇ ಪರೀಕ್ಷೆ ನಡೆಯಲಿದೆ.
ಈಗಾಗಲೇ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಎಲ್ ಕೆಜಿ ಮತ್ತು ಯುಕೆಜಿ ಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ರಾಜ್ಯಾದ್ಯಂತ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಕೊರೋನಾ ವೈರಸ್ ನಿಂದ ಉಂಟಾಗಬಹುದಾದ ಅಪಾಯದಿಂದ ಸಂರಕ್ಷಿಸುವ ನಿಟ್ಟಿನಲ್ಲಿ ಆದಷ್ಟು ಬೇಗನೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಿ ಬೇಸಿಗೆ ರಜೆಯನ್ನು ಘೋಷಿಸಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.
ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 11ರಿಂದ 16ರವರೆಗೆ ಹಾಗೂ 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 23ರೊಳಗೆ ಪೂರ್ಣಗೊಳಿಸಿ ರಜೆ ನೀಡುವಂತೆ ಆದೇಶಿಸಲಾಗಿದೆ.
10ನೇ ತರಗತಿಯ ವಿದ್ಯಾರ್ಥಿಗಳಿಗೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸಿ ನಂತರ ರಜೆ ಘೋಷಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…