ಬೆಂಗಳೂರು: ಕೊರೋನಾ ವೈರಸ್ ಭೀತಿ ಶಾಲಾ ಮಕ್ಕಳ ಪರೀಕ್ಷೆಗೂ ಅಡ್ಡಿಯಾಗಿದೆ. ಈ ವೈರಸ್ ಹರಡುವ ಭೀತಿ ಇರುವುದರಿಂದ ಆರೋಗ್ಯ ಇಲಾಖೆಯ ಸೂಚನೆಯ ಮೇರೆಗೆ ಶಿಕ್ಷಣ ಇಲಾಖೆಯು ಶಾಲಾ ಮಕ್ಕಳ ಪರೀಕ್ಷಾ ದಿನದ ವೇಳಾಪಟ್ಟಿಯಲ್ಲಿ ಮಾರ್ಪಾಡುಗೊಳಿಸಿದೆ. ಹೀಗಾಗಿ ನಿಗದಿತ ಸಮಯಕ್ಕಿಂತ ಮೊದಲೇ ಪರೀಕ್ಷೆ ನಡೆಯಲಿದೆ.
ಈಗಾಗಲೇ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಎಲ್ ಕೆಜಿ ಮತ್ತು ಯುಕೆಜಿ ಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ರಾಜ್ಯಾದ್ಯಂತ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಕೊರೋನಾ ವೈರಸ್ ನಿಂದ ಉಂಟಾಗಬಹುದಾದ ಅಪಾಯದಿಂದ ಸಂರಕ್ಷಿಸುವ ನಿಟ್ಟಿನಲ್ಲಿ ಆದಷ್ಟು ಬೇಗನೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಿ ಬೇಸಿಗೆ ರಜೆಯನ್ನು ಘೋಷಿಸಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.
ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 11ರಿಂದ 16ರವರೆಗೆ ಹಾಗೂ 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 23ರೊಳಗೆ ಪೂರ್ಣಗೊಳಿಸಿ ರಜೆ ನೀಡುವಂತೆ ಆದೇಶಿಸಲಾಗಿದೆ.
10ನೇ ತರಗತಿಯ ವಿದ್ಯಾರ್ಥಿಗಳಿಗೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸಿ ನಂತರ ರಜೆ ಘೋಷಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…