ಮಡಿಕೇರಿ: ವ್ಯಕ್ತಿಯೊಬ್ಬರನ್ನು ಕಡಿದು ಕೊಲೆ ಮಾಡಿ ಕಾಫಿ ತೋಟದಲ್ಲಿ ಹಾಕಿದ ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳವಾರದಂದು ಸೋಮವಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಜಂಬೂರು ಗ್ರಾಮದ ಕಾಫಿ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಆತನ ಕುತ್ತಿಗೆ ಹಾಗೂ ತಲೆಯ ಭಾಗಕ್ಕೆ ಯಾವುದೋ ಹರಿತವಾದ ಆಯುಧದಿಂದ ಕಡಿದು ಕೊಲೆ ಮಾಡಿ ಅದನ್ನು ಮರೆಮಾಚುವ ಉದ್ದೇಶದಿಂದ ಮೃತದೇಹವನ್ನು ಕಾಫಿ ತೋಟದೊಳಗೆ ಹಾಕಿದ ಪ್ರಕರಣದ ಆರೋಪಿಗಳಾದ ಕಿಶೋರ್ ಕುಮಾರ್( 27) ರಾಹುಲ್ ಕುಮಾರ್(22) ಇವರುಗಳನ್ನು ಕ್ಷಿಪ್ರಗತಿಯಲ್ಲಿ ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಪ್ರಕರಣವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ, ಸೋಮವಾರಪೇಟೆ ವೃತ್ತ ನಿರೀಕ್ಷಕರಾದ ನಂಜುಂಡೇಗೌಡ ಮತ್ತು ಸಿಬ್ಬಂದಿಗಳು, ಸೋಮವಾರಪೇಟೆ ಪೊಲೀಸ್ ಠಾಣಾ ಪಿ.ಎಸ್.ಐ., ಶಿವಶಂಕರ್ ಮತ್ತು ಸಿಬ್ಬಂದಿಗಳು ಮತ್ತು ಮಡಿಕೇರಿ ಡಿ.ಸಿ.ಐ.ಬಿ., ವಿಭಾಗದ ಸಿಬ್ಬಂದಿಗಳು ಪತ್ತೆಹಚ್ಚಿದ್ದು ಇವರ ಕಾರ್ಯವೈಖರಿಯನ್ನು ಪೊಲೀಸ್ ವರಿಷ್ಠಾಧಿಕಾರಿಯವರು ಶ್ಲಾಘಿಸಿರುತ್ತಾರೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…