ಮಡಿಕೇರಿ: ವ್ಯಕ್ತಿಯೊಬ್ಬರನ್ನು ಕಡಿದು ಕೊಲೆ ಮಾಡಿ ಕಾಫಿ ತೋಟದಲ್ಲಿ ಹಾಕಿದ ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳವಾರದಂದು ಸೋಮವಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಜಂಬೂರು ಗ್ರಾಮದ ಕಾಫಿ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಆತನ ಕುತ್ತಿಗೆ ಹಾಗೂ ತಲೆಯ ಭಾಗಕ್ಕೆ ಯಾವುದೋ ಹರಿತವಾದ ಆಯುಧದಿಂದ ಕಡಿದು ಕೊಲೆ ಮಾಡಿ ಅದನ್ನು ಮರೆಮಾಚುವ ಉದ್ದೇಶದಿಂದ ಮೃತದೇಹವನ್ನು ಕಾಫಿ ತೋಟದೊಳಗೆ ಹಾಕಿದ ಪ್ರಕರಣದ ಆರೋಪಿಗಳಾದ ಕಿಶೋರ್ ಕುಮಾರ್( 27) ರಾಹುಲ್ ಕುಮಾರ್(22) ಇವರುಗಳನ್ನು ಕ್ಷಿಪ್ರಗತಿಯಲ್ಲಿ ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಪ್ರಕರಣವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ, ಸೋಮವಾರಪೇಟೆ ವೃತ್ತ ನಿರೀಕ್ಷಕರಾದ ನಂಜುಂಡೇಗೌಡ ಮತ್ತು ಸಿಬ್ಬಂದಿಗಳು, ಸೋಮವಾರಪೇಟೆ ಪೊಲೀಸ್ ಠಾಣಾ ಪಿ.ಎಸ್.ಐ., ಶಿವಶಂಕರ್ ಮತ್ತು ಸಿಬ್ಬಂದಿಗಳು ಮತ್ತು ಮಡಿಕೇರಿ ಡಿ.ಸಿ.ಐ.ಬಿ., ವಿಭಾಗದ ಸಿಬ್ಬಂದಿಗಳು ಪತ್ತೆಹಚ್ಚಿದ್ದು ಇವರ ಕಾರ್ಯವೈಖರಿಯನ್ನು ಪೊಲೀಸ್ ವರಿಷ್ಠಾಧಿಕಾರಿಯವರು ಶ್ಲಾಘಿಸಿರುತ್ತಾರೆ.
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…
ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…
ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…
ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ವಾತಾವರಣ ಮುಂದುವರಿಯಲಿದೆ. ಜೂನ್…
ಭಾರತದ ನಗರಗಳ ಸಾವಯವ ತ್ಯಾಜ್ಯವನ್ನು ಸಮರ್ಥವಾಗಿ ನಿರ್ವಹಿಸಿದರೆ 2047ರ ವೇಳೆಗೆ ₹4.3 ಲಕ್ಷ…