ಮಡಿಕೇರಿ: ವ್ಯಕ್ತಿಯೊಬ್ಬರನ್ನು ಕಡಿದು ಕೊಲೆ ಮಾಡಿ ಕಾಫಿ ತೋಟದಲ್ಲಿ ಹಾಕಿದ ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳವಾರದಂದು ಸೋಮವಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಜಂಬೂರು ಗ್ರಾಮದ ಕಾಫಿ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಆತನ ಕುತ್ತಿಗೆ ಹಾಗೂ ತಲೆಯ ಭಾಗಕ್ಕೆ ಯಾವುದೋ ಹರಿತವಾದ ಆಯುಧದಿಂದ ಕಡಿದು ಕೊಲೆ ಮಾಡಿ ಅದನ್ನು ಮರೆಮಾಚುವ ಉದ್ದೇಶದಿಂದ ಮೃತದೇಹವನ್ನು ಕಾಫಿ ತೋಟದೊಳಗೆ ಹಾಕಿದ ಪ್ರಕರಣದ ಆರೋಪಿಗಳಾದ ಕಿಶೋರ್ ಕುಮಾರ್( 27) ರಾಹುಲ್ ಕುಮಾರ್(22) ಇವರುಗಳನ್ನು ಕ್ಷಿಪ್ರಗತಿಯಲ್ಲಿ ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಪ್ರಕರಣವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ, ಸೋಮವಾರಪೇಟೆ ವೃತ್ತ ನಿರೀಕ್ಷಕರಾದ ನಂಜುಂಡೇಗೌಡ ಮತ್ತು ಸಿಬ್ಬಂದಿಗಳು, ಸೋಮವಾರಪೇಟೆ ಪೊಲೀಸ್ ಠಾಣಾ ಪಿ.ಎಸ್.ಐ., ಶಿವಶಂಕರ್ ಮತ್ತು ಸಿಬ್ಬಂದಿಗಳು ಮತ್ತು ಮಡಿಕೇರಿ ಡಿ.ಸಿ.ಐ.ಬಿ., ವಿಭಾಗದ ಸಿಬ್ಬಂದಿಗಳು ಪತ್ತೆಹಚ್ಚಿದ್ದು ಇವರ ಕಾರ್ಯವೈಖರಿಯನ್ನು ಪೊಲೀಸ್ ವರಿಷ್ಠಾಧಿಕಾರಿಯವರು ಶ್ಲಾಘಿಸಿರುತ್ತಾರೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…