ಮಡಿಕೇರಿ: ವ್ಯಕ್ತಿಯೊಬ್ಬರನ್ನು ಕಡಿದು ಕೊಲೆ ಮಾಡಿ ಕಾಫಿ ತೋಟದಲ್ಲಿ ಹಾಕಿದ ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳವಾರದಂದು ಸೋಮವಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಜಂಬೂರು ಗ್ರಾಮದ ಕಾಫಿ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಆತನ ಕುತ್ತಿಗೆ ಹಾಗೂ ತಲೆಯ ಭಾಗಕ್ಕೆ ಯಾವುದೋ ಹರಿತವಾದ ಆಯುಧದಿಂದ ಕಡಿದು ಕೊಲೆ ಮಾಡಿ ಅದನ್ನು ಮರೆಮಾಚುವ ಉದ್ದೇಶದಿಂದ ಮೃತದೇಹವನ್ನು ಕಾಫಿ ತೋಟದೊಳಗೆ ಹಾಕಿದ ಪ್ರಕರಣದ ಆರೋಪಿಗಳಾದ ಕಿಶೋರ್ ಕುಮಾರ್( 27) ರಾಹುಲ್ ಕುಮಾರ್(22) ಇವರುಗಳನ್ನು ಕ್ಷಿಪ್ರಗತಿಯಲ್ಲಿ ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಪ್ರಕರಣವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ, ಸೋಮವಾರಪೇಟೆ ವೃತ್ತ ನಿರೀಕ್ಷಕರಾದ ನಂಜುಂಡೇಗೌಡ ಮತ್ತು ಸಿಬ್ಬಂದಿಗಳು, ಸೋಮವಾರಪೇಟೆ ಪೊಲೀಸ್ ಠಾಣಾ ಪಿ.ಎಸ್.ಐ., ಶಿವಶಂಕರ್ ಮತ್ತು ಸಿಬ್ಬಂದಿಗಳು ಮತ್ತು ಮಡಿಕೇರಿ ಡಿ.ಸಿ.ಐ.ಬಿ., ವಿಭಾಗದ ಸಿಬ್ಬಂದಿಗಳು ಪತ್ತೆಹಚ್ಚಿದ್ದು ಇವರ ಕಾರ್ಯವೈಖರಿಯನ್ನು ಪೊಲೀಸ್ ವರಿಷ್ಠಾಧಿಕಾರಿಯವರು ಶ್ಲಾಘಿಸಿರುತ್ತಾರೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…