ಮಡಿಕೇರಿ: ವ್ಯಕ್ತಿಯೊಬ್ಬರನ್ನು ಕಡಿದು ಕೊಲೆ ಮಾಡಿ ಕಾಫಿ ತೋಟದಲ್ಲಿ ಹಾಕಿದ ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳವಾರದಂದು ಸೋಮವಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಜಂಬೂರು ಗ್ರಾಮದ ಕಾಫಿ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಆತನ ಕುತ್ತಿಗೆ ಹಾಗೂ ತಲೆಯ ಭಾಗಕ್ಕೆ ಯಾವುದೋ ಹರಿತವಾದ ಆಯುಧದಿಂದ ಕಡಿದು ಕೊಲೆ ಮಾಡಿ ಅದನ್ನು ಮರೆಮಾಚುವ ಉದ್ದೇಶದಿಂದ ಮೃತದೇಹವನ್ನು ಕಾಫಿ ತೋಟದೊಳಗೆ ಹಾಕಿದ ಪ್ರಕರಣದ ಆರೋಪಿಗಳಾದ ಕಿಶೋರ್ ಕುಮಾರ್( 27) ರಾಹುಲ್ ಕುಮಾರ್(22) ಇವರುಗಳನ್ನು ಕ್ಷಿಪ್ರಗತಿಯಲ್ಲಿ ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಪ್ರಕರಣವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ, ಸೋಮವಾರಪೇಟೆ ವೃತ್ತ ನಿರೀಕ್ಷಕರಾದ ನಂಜುಂಡೇಗೌಡ ಮತ್ತು ಸಿಬ್ಬಂದಿಗಳು, ಸೋಮವಾರಪೇಟೆ ಪೊಲೀಸ್ ಠಾಣಾ ಪಿ.ಎಸ್.ಐ., ಶಿವಶಂಕರ್ ಮತ್ತು ಸಿಬ್ಬಂದಿಗಳು ಮತ್ತು ಮಡಿಕೇರಿ ಡಿ.ಸಿ.ಐ.ಬಿ., ವಿಭಾಗದ ಸಿಬ್ಬಂದಿಗಳು ಪತ್ತೆಹಚ್ಚಿದ್ದು ಇವರ ಕಾರ್ಯವೈಖರಿಯನ್ನು ಪೊಲೀಸ್ ವರಿಷ್ಠಾಧಿಕಾರಿಯವರು ಶ್ಲಾಘಿಸಿರುತ್ತಾರೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…