ಕೊಲ್ಲಮೊಗ್ರು: ಕೊಲ್ಲಮೊಗ್ರು ಗ್ರಾಮದ ಕಾರಣಿಕ ದೈವ ನಿಲ್ಕೂರು ಶಿರಾಡಿ ದೈವಸ್ಥಾನದ ಕಾಣಿಕೆ ಹುಂಡಿ ಕಳವಿಗೆ ಯತ್ನ ಮಂಗಳವಾರ ರಾತ್ರಿ ನಡೆದಿದೆ.
ಬುಧವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದೆ. ಹರಿಹರಪಲ್ಲತ್ತಡ್ಕ-ಕೊಲ್ಲಮೊಗ್ರು ರಸ್ತೆಯ ನಿಲ್ಕೂರು ಎಂಬಲ್ಲಿ ರಸ್ತೆಯ ಬದಿಯಲ್ಲಿ ಕಾರಣಿಕ ಪ್ರಸಿದ್ಧ ಶಿರಾಡಿ ದೈವಸ್ಥಾನದ ಕಾಣಿಕೆ ಡಬ್ಬಿ ಇದೆ. ಇದರ ಬೀಗವನ್ನು ಒಡೆಯಲು ಪ್ರಯತ್ನಿಸಿದ್ದಾರೆ. ಕಳ್ಳರ ಪ್ರಯತ್ನ ಸಫಲವಾಗದ ಕಾರಣ ಹಣ ಕಳ್ಳತನವಾಗಿಲ್ಲ. ಈ ಹಿಂದೆ ಅನೇಕ ಬಾರಿ ಇಲ್ಲಿ ಕಳವಿಗೆ ಯತ್ನ ನಡೆದಿತ್ತು. ಪ್ರತೀ ಬಾರಿ ವಿಫಲ ಯತ್ನವಾಗಿದೆ.
ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಇದೇ ರೀತಿ ಪ್ರಯತ್ನ ಇಲ್ಲಿ ನಡೆದಿತ್ತು. ಈ ಕುರಿತು ಪೊಲೀಸ್ ಠಾಣೆಗೆ ದೂರು ಕೂಡ ನೀಡಲಾಗಿತ್ತು. ಯಾವುದೇ ಪ್ರಯೋಜನ ಆಗಿರಲಿಲ್ಲ. ಹೀಗಾಗಿ ಈ ಬಾರಿ ದೈವಸ್ಥಾನದ ಆಡಳಿತ ಮಂಡಳಿ ಯಾವುದೇ ದೂರು ನೀಡದೆ ದೈವದ ಮುಂದೆ ಪ್ರಾರ್ಥನೆ ಮಾಡಿದೆ. ಶಿರೂರು ಶ್ರೀ ಶಿರಾಡಿ ದೈವಸ್ಥಾನವೂ ಅತ್ಯಂತ ಕಾರಣಿಕ ದೈವಸ್ಥಾನವಾಗಿದೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490