ಕೊಲ್ಲಮೊಗ್ರು: ಕೊಲ್ಲಮೊಗ್ರು ಗ್ರಾಮದ ಕಾರಣಿಕ ದೈವ ನಿಲ್ಕೂರು ಶಿರಾಡಿ ದೈವಸ್ಥಾನದ ಕಾಣಿಕೆ ಹುಂಡಿ ಕಳವಿಗೆ ಯತ್ನ ಮಂಗಳವಾರ ರಾತ್ರಿ ನಡೆದಿದೆ.
ಬುಧವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದೆ. ಹರಿಹರಪಲ್ಲತ್ತಡ್ಕ-ಕೊಲ್ಲಮೊಗ್ರು ರಸ್ತೆಯ ನಿಲ್ಕೂರು ಎಂಬಲ್ಲಿ ರಸ್ತೆಯ ಬದಿಯಲ್ಲಿ ಕಾರಣಿಕ ಪ್ರಸಿದ್ಧ ಶಿರಾಡಿ ದೈವಸ್ಥಾನದ ಕಾಣಿಕೆ ಡಬ್ಬಿ ಇದೆ. ಇದರ ಬೀಗವನ್ನು ಒಡೆಯಲು ಪ್ರಯತ್ನಿಸಿದ್ದಾರೆ. ಕಳ್ಳರ ಪ್ರಯತ್ನ ಸಫಲವಾಗದ ಕಾರಣ ಹಣ ಕಳ್ಳತನವಾಗಿಲ್ಲ. ಈ ಹಿಂದೆ ಅನೇಕ ಬಾರಿ ಇಲ್ಲಿ ಕಳವಿಗೆ ಯತ್ನ ನಡೆದಿತ್ತು. ಪ್ರತೀ ಬಾರಿ ವಿಫಲ ಯತ್ನವಾಗಿದೆ.
ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಇದೇ ರೀತಿ ಪ್ರಯತ್ನ ಇಲ್ಲಿ ನಡೆದಿತ್ತು. ಈ ಕುರಿತು ಪೊಲೀಸ್ ಠಾಣೆಗೆ ದೂರು ಕೂಡ ನೀಡಲಾಗಿತ್ತು. ಯಾವುದೇ ಪ್ರಯೋಜನ ಆಗಿರಲಿಲ್ಲ. ಹೀಗಾಗಿ ಈ ಬಾರಿ ದೈವಸ್ಥಾನದ ಆಡಳಿತ ಮಂಡಳಿ ಯಾವುದೇ ದೂರು ನೀಡದೆ ದೈವದ ಮುಂದೆ ಪ್ರಾರ್ಥನೆ ಮಾಡಿದೆ. ಶಿರೂರು ಶ್ರೀ ಶಿರಾಡಿ ದೈವಸ್ಥಾನವೂ ಅತ್ಯಂತ ಕಾರಣಿಕ ದೈವಸ್ಥಾನವಾಗಿದೆ.
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…
ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…