ಕೊಲ್ಲಮೊಗ್ರು: ಕೊಲ್ಲಮೊಗ್ರು ಗ್ರಾಮದ ಕಾರಣಿಕ ದೈವ ನಿಲ್ಕೂರು ಶಿರಾಡಿ ದೈವಸ್ಥಾನದ ಕಾಣಿಕೆ ಹುಂಡಿ ಕಳವಿಗೆ ಯತ್ನ ಮಂಗಳವಾರ ರಾತ್ರಿ ನಡೆದಿದೆ.
ಬುಧವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದೆ. ಹರಿಹರಪಲ್ಲತ್ತಡ್ಕ-ಕೊಲ್ಲಮೊಗ್ರು ರಸ್ತೆಯ ನಿಲ್ಕೂರು ಎಂಬಲ್ಲಿ ರಸ್ತೆಯ ಬದಿಯಲ್ಲಿ ಕಾರಣಿಕ ಪ್ರಸಿದ್ಧ ಶಿರಾಡಿ ದೈವಸ್ಥಾನದ ಕಾಣಿಕೆ ಡಬ್ಬಿ ಇದೆ. ಇದರ ಬೀಗವನ್ನು ಒಡೆಯಲು ಪ್ರಯತ್ನಿಸಿದ್ದಾರೆ. ಕಳ್ಳರ ಪ್ರಯತ್ನ ಸಫಲವಾಗದ ಕಾರಣ ಹಣ ಕಳ್ಳತನವಾಗಿಲ್ಲ. ಈ ಹಿಂದೆ ಅನೇಕ ಬಾರಿ ಇಲ್ಲಿ ಕಳವಿಗೆ ಯತ್ನ ನಡೆದಿತ್ತು. ಪ್ರತೀ ಬಾರಿ ವಿಫಲ ಯತ್ನವಾಗಿದೆ.
ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಇದೇ ರೀತಿ ಪ್ರಯತ್ನ ಇಲ್ಲಿ ನಡೆದಿತ್ತು. ಈ ಕುರಿತು ಪೊಲೀಸ್ ಠಾಣೆಗೆ ದೂರು ಕೂಡ ನೀಡಲಾಗಿತ್ತು. ಯಾವುದೇ ಪ್ರಯೋಜನ ಆಗಿರಲಿಲ್ಲ. ಹೀಗಾಗಿ ಈ ಬಾರಿ ದೈವಸ್ಥಾನದ ಆಡಳಿತ ಮಂಡಳಿ ಯಾವುದೇ ದೂರು ನೀಡದೆ ದೈವದ ಮುಂದೆ ಪ್ರಾರ್ಥನೆ ಮಾಡಿದೆ. ಶಿರೂರು ಶ್ರೀ ಶಿರಾಡಿ ದೈವಸ್ಥಾನವೂ ಅತ್ಯಂತ ಕಾರಣಿಕ ದೈವಸ್ಥಾನವಾಗಿದೆ.
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…