ಕೊಲ್ಲಮೊಗ್ರು: ಕೊಲ್ಲಮೊಗ್ರು ಗ್ರಾಮದ ಕಾರಣಿಕ ದೈವ ನಿಲ್ಕೂರು ಶಿರಾಡಿ ದೈವಸ್ಥಾನದ ಕಾಣಿಕೆ ಹುಂಡಿ ಕಳವಿಗೆ ಯತ್ನ ಮಂಗಳವಾರ ರಾತ್ರಿ ನಡೆದಿದೆ.
ಬುಧವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದೆ. ಹರಿಹರಪಲ್ಲತ್ತಡ್ಕ-ಕೊಲ್ಲಮೊಗ್ರು ರಸ್ತೆಯ ನಿಲ್ಕೂರು ಎಂಬಲ್ಲಿ ರಸ್ತೆಯ ಬದಿಯಲ್ಲಿ ಕಾರಣಿಕ ಪ್ರಸಿದ್ಧ ಶಿರಾಡಿ ದೈವಸ್ಥಾನದ ಕಾಣಿಕೆ ಡಬ್ಬಿ ಇದೆ. ಇದರ ಬೀಗವನ್ನು ಒಡೆಯಲು ಪ್ರಯತ್ನಿಸಿದ್ದಾರೆ. ಕಳ್ಳರ ಪ್ರಯತ್ನ ಸಫಲವಾಗದ ಕಾರಣ ಹಣ ಕಳ್ಳತನವಾಗಿಲ್ಲ. ಈ ಹಿಂದೆ ಅನೇಕ ಬಾರಿ ಇಲ್ಲಿ ಕಳವಿಗೆ ಯತ್ನ ನಡೆದಿತ್ತು. ಪ್ರತೀ ಬಾರಿ ವಿಫಲ ಯತ್ನವಾಗಿದೆ.
ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಇದೇ ರೀತಿ ಪ್ರಯತ್ನ ಇಲ್ಲಿ ನಡೆದಿತ್ತು. ಈ ಕುರಿತು ಪೊಲೀಸ್ ಠಾಣೆಗೆ ದೂರು ಕೂಡ ನೀಡಲಾಗಿತ್ತು. ಯಾವುದೇ ಪ್ರಯೋಜನ ಆಗಿರಲಿಲ್ಲ. ಹೀಗಾಗಿ ಈ ಬಾರಿ ದೈವಸ್ಥಾನದ ಆಡಳಿತ ಮಂಡಳಿ ಯಾವುದೇ ದೂರು ನೀಡದೆ ದೈವದ ಮುಂದೆ ಪ್ರಾರ್ಥನೆ ಮಾಡಿದೆ. ಶಿರೂರು ಶ್ರೀ ಶಿರಾಡಿ ದೈವಸ್ಥಾನವೂ ಅತ್ಯಂತ ಕಾರಣಿಕ ದೈವಸ್ಥಾನವಾಗಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…