ಕೊಲ್ಲಮೊಗ್ರು: ಕೊಲ್ಲಮೊಗ್ರು ಗ್ರಾಮದ ಕಾರಣಿಕ ದೈವ ನಿಲ್ಕೂರು ಶಿರಾಡಿ ದೈವಸ್ಥಾನದ ಕಾಣಿಕೆ ಹುಂಡಿ ಕಳವಿಗೆ ಯತ್ನ ಮಂಗಳವಾರ ರಾತ್ರಿ ನಡೆದಿದೆ.
ಬುಧವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದೆ. ಹರಿಹರಪಲ್ಲತ್ತಡ್ಕ-ಕೊಲ್ಲಮೊಗ್ರು ರಸ್ತೆಯ ನಿಲ್ಕೂರು ಎಂಬಲ್ಲಿ ರಸ್ತೆಯ ಬದಿಯಲ್ಲಿ ಕಾರಣಿಕ ಪ್ರಸಿದ್ಧ ಶಿರಾಡಿ ದೈವಸ್ಥಾನದ ಕಾಣಿಕೆ ಡಬ್ಬಿ ಇದೆ. ಇದರ ಬೀಗವನ್ನು ಒಡೆಯಲು ಪ್ರಯತ್ನಿಸಿದ್ದಾರೆ. ಕಳ್ಳರ ಪ್ರಯತ್ನ ಸಫಲವಾಗದ ಕಾರಣ ಹಣ ಕಳ್ಳತನವಾಗಿಲ್ಲ. ಈ ಹಿಂದೆ ಅನೇಕ ಬಾರಿ ಇಲ್ಲಿ ಕಳವಿಗೆ ಯತ್ನ ನಡೆದಿತ್ತು. ಪ್ರತೀ ಬಾರಿ ವಿಫಲ ಯತ್ನವಾಗಿದೆ.
ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಇದೇ ರೀತಿ ಪ್ರಯತ್ನ ಇಲ್ಲಿ ನಡೆದಿತ್ತು. ಈ ಕುರಿತು ಪೊಲೀಸ್ ಠಾಣೆಗೆ ದೂರು ಕೂಡ ನೀಡಲಾಗಿತ್ತು. ಯಾವುದೇ ಪ್ರಯೋಜನ ಆಗಿರಲಿಲ್ಲ. ಹೀಗಾಗಿ ಈ ಬಾರಿ ದೈವಸ್ಥಾನದ ಆಡಳಿತ ಮಂಡಳಿ ಯಾವುದೇ ದೂರು ನೀಡದೆ ದೈವದ ಮುಂದೆ ಪ್ರಾರ್ಥನೆ ಮಾಡಿದೆ. ಶಿರೂರು ಶ್ರೀ ಶಿರಾಡಿ ದೈವಸ್ಥಾನವೂ ಅತ್ಯಂತ ಕಾರಣಿಕ ದೈವಸ್ಥಾನವಾಗಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…