ಕೊಲ್ಲಮೊಗ್ರು: ಕೊಲ್ಲಮೊಗ್ರು ಗ್ರಾಮದ ಕಾರಣಿಕ ದೈವ ನಿಲ್ಕೂರು ಶಿರಾಡಿ ದೈವಸ್ಥಾನದ ಕಾಣಿಕೆ ಹುಂಡಿ ಕಳವಿಗೆ ಯತ್ನ ಮಂಗಳವಾರ ರಾತ್ರಿ ನಡೆದಿದೆ.
ಬುಧವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದೆ. ಹರಿಹರಪಲ್ಲತ್ತಡ್ಕ-ಕೊಲ್ಲಮೊಗ್ರು ರಸ್ತೆಯ ನಿಲ್ಕೂರು ಎಂಬಲ್ಲಿ ರಸ್ತೆಯ ಬದಿಯಲ್ಲಿ ಕಾರಣಿಕ ಪ್ರಸಿದ್ಧ ಶಿರಾಡಿ ದೈವಸ್ಥಾನದ ಕಾಣಿಕೆ ಡಬ್ಬಿ ಇದೆ. ಇದರ ಬೀಗವನ್ನು ಒಡೆಯಲು ಪ್ರಯತ್ನಿಸಿದ್ದಾರೆ. ಕಳ್ಳರ ಪ್ರಯತ್ನ ಸಫಲವಾಗದ ಕಾರಣ ಹಣ ಕಳ್ಳತನವಾಗಿಲ್ಲ. ಈ ಹಿಂದೆ ಅನೇಕ ಬಾರಿ ಇಲ್ಲಿ ಕಳವಿಗೆ ಯತ್ನ ನಡೆದಿತ್ತು. ಪ್ರತೀ ಬಾರಿ ವಿಫಲ ಯತ್ನವಾಗಿದೆ.
ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಇದೇ ರೀತಿ ಪ್ರಯತ್ನ ಇಲ್ಲಿ ನಡೆದಿತ್ತು. ಈ ಕುರಿತು ಪೊಲೀಸ್ ಠಾಣೆಗೆ ದೂರು ಕೂಡ ನೀಡಲಾಗಿತ್ತು. ಯಾವುದೇ ಪ್ರಯೋಜನ ಆಗಿರಲಿಲ್ಲ. ಹೀಗಾಗಿ ಈ ಬಾರಿ ದೈವಸ್ಥಾನದ ಆಡಳಿತ ಮಂಡಳಿ ಯಾವುದೇ ದೂರು ನೀಡದೆ ದೈವದ ಮುಂದೆ ಪ್ರಾರ್ಥನೆ ಮಾಡಿದೆ. ಶಿರೂರು ಶ್ರೀ ಶಿರಾಡಿ ದೈವಸ್ಥಾನವೂ ಅತ್ಯಂತ ಕಾರಣಿಕ ದೈವಸ್ಥಾನವಾಗಿದೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…