ಕೊಲ್ಲಮೊಗ್ರು: ಕೊಲ್ಲಮೊಗ್ರು ಗ್ರಾಮದ ಕಾರಣಿಕ ದೈವ ನಿಲ್ಕೂರು ಶಿರಾಡಿ ದೈವಸ್ಥಾನದ ಕಾಣಿಕೆ ಹುಂಡಿ ಕಳವಿಗೆ ಯತ್ನ ಮಂಗಳವಾರ ರಾತ್ರಿ ನಡೆದಿದೆ.
ಬುಧವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದೆ. ಹರಿಹರಪಲ್ಲತ್ತಡ್ಕ-ಕೊಲ್ಲಮೊಗ್ರು ರಸ್ತೆಯ ನಿಲ್ಕೂರು ಎಂಬಲ್ಲಿ ರಸ್ತೆಯ ಬದಿಯಲ್ಲಿ ಕಾರಣಿಕ ಪ್ರಸಿದ್ಧ ಶಿರಾಡಿ ದೈವಸ್ಥಾನದ ಕಾಣಿಕೆ ಡಬ್ಬಿ ಇದೆ. ಇದರ ಬೀಗವನ್ನು ಒಡೆಯಲು ಪ್ರಯತ್ನಿಸಿದ್ದಾರೆ. ಕಳ್ಳರ ಪ್ರಯತ್ನ ಸಫಲವಾಗದ ಕಾರಣ ಹಣ ಕಳ್ಳತನವಾಗಿಲ್ಲ. ಈ ಹಿಂದೆ ಅನೇಕ ಬಾರಿ ಇಲ್ಲಿ ಕಳವಿಗೆ ಯತ್ನ ನಡೆದಿತ್ತು. ಪ್ರತೀ ಬಾರಿ ವಿಫಲ ಯತ್ನವಾಗಿದೆ.
ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಇದೇ ರೀತಿ ಪ್ರಯತ್ನ ಇಲ್ಲಿ ನಡೆದಿತ್ತು. ಈ ಕುರಿತು ಪೊಲೀಸ್ ಠಾಣೆಗೆ ದೂರು ಕೂಡ ನೀಡಲಾಗಿತ್ತು. ಯಾವುದೇ ಪ್ರಯೋಜನ ಆಗಿರಲಿಲ್ಲ. ಹೀಗಾಗಿ ಈ ಬಾರಿ ದೈವಸ್ಥಾನದ ಆಡಳಿತ ಮಂಡಳಿ ಯಾವುದೇ ದೂರು ನೀಡದೆ ದೈವದ ಮುಂದೆ ಪ್ರಾರ್ಥನೆ ಮಾಡಿದೆ. ಶಿರೂರು ಶ್ರೀ ಶಿರಾಡಿ ದೈವಸ್ಥಾನವೂ ಅತ್ಯಂತ ಕಾರಣಿಕ ದೈವಸ್ಥಾನವಾಗಿದೆ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…