ಕೊಲ್ಲಮೊಗ್ರು: ಕೊಲ್ಲಮೊಗ್ರು ಗ್ರಾಮದ ಕಾರಣಿಕ ದೈವ ನಿಲ್ಕೂರು ಶಿರಾಡಿ ದೈವಸ್ಥಾನದ ಕಾಣಿಕೆ ಹುಂಡಿ ಕಳವಿಗೆ ಯತ್ನ ಮಂಗಳವಾರ ರಾತ್ರಿ ನಡೆದಿದೆ.
ಬುಧವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದೆ. ಹರಿಹರಪಲ್ಲತ್ತಡ್ಕ-ಕೊಲ್ಲಮೊಗ್ರು ರಸ್ತೆಯ ನಿಲ್ಕೂರು ಎಂಬಲ್ಲಿ ರಸ್ತೆಯ ಬದಿಯಲ್ಲಿ ಕಾರಣಿಕ ಪ್ರಸಿದ್ಧ ಶಿರಾಡಿ ದೈವಸ್ಥಾನದ ಕಾಣಿಕೆ ಡಬ್ಬಿ ಇದೆ. ಇದರ ಬೀಗವನ್ನು ಒಡೆಯಲು ಪ್ರಯತ್ನಿಸಿದ್ದಾರೆ. ಕಳ್ಳರ ಪ್ರಯತ್ನ ಸಫಲವಾಗದ ಕಾರಣ ಹಣ ಕಳ್ಳತನವಾಗಿಲ್ಲ. ಈ ಹಿಂದೆ ಅನೇಕ ಬಾರಿ ಇಲ್ಲಿ ಕಳವಿಗೆ ಯತ್ನ ನಡೆದಿತ್ತು. ಪ್ರತೀ ಬಾರಿ ವಿಫಲ ಯತ್ನವಾಗಿದೆ.
ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಇದೇ ರೀತಿ ಪ್ರಯತ್ನ ಇಲ್ಲಿ ನಡೆದಿತ್ತು. ಈ ಕುರಿತು ಪೊಲೀಸ್ ಠಾಣೆಗೆ ದೂರು ಕೂಡ ನೀಡಲಾಗಿತ್ತು. ಯಾವುದೇ ಪ್ರಯೋಜನ ಆಗಿರಲಿಲ್ಲ. ಹೀಗಾಗಿ ಈ ಬಾರಿ ದೈವಸ್ಥಾನದ ಆಡಳಿತ ಮಂಡಳಿ ಯಾವುದೇ ದೂರು ನೀಡದೆ ದೈವದ ಮುಂದೆ ಪ್ರಾರ್ಥನೆ ಮಾಡಿದೆ. ಶಿರೂರು ಶ್ರೀ ಶಿರಾಡಿ ದೈವಸ್ಥಾನವೂ ಅತ್ಯಂತ ಕಾರಣಿಕ ದೈವಸ್ಥಾನವಾಗಿದೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…