ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಶಾಲೆಯಲ್ಲಿ ಶಿಕ್ಷಕರ ಕೊರತೆ : ಪ್ರತಿಭಟನೆಗೆ ನಿರ್ಧಾರ

July 22, 2019
4:00 PM

ಕೊಲ್ಲಮೊಗ್ರ: ತಾಲೂಕಿನ ಗ್ರಾಮೀಣ ಭಾಗವಾದ ಕೊಲ್ಲಮೊಗ್ರದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು ಈ ಬಗ್ಗೆ ಹಲವು ಬಾರಿ ಇಲಾಖೆಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲು ಈಗಾಗಲೇ ಚಿಂತನೆ ನಡೆದಿದೆ.

Advertisement
Advertisement
Advertisement

ಗ್ರಾಮೀಣ ಭಾಗದ ವಿದ್ಯಾದೇಗುವಲವಾದ ಈ ಸರಕಾರಿ ಶಾಲೆಯಲ್ಲಿ ಕಳೆದ ವರ್ಷ 71 ವಿದ್ಯಾರ್ಥಿಗಳು ಇದ್ದರು. ಈ ಬಾರಿ 61 ಕ್ಕೆ ಇಳಿದಿದೆ. ಕಾರಣ ಶಿಕ್ಷಕರ ಕೊರತೆ. ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರು, ಒಬ್ಬರು ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಇದ್ದಾರೆ. ಆದರೆ ಈ ಶಾಲೆಗೆ ನೇಮಕವಾದ ಒಬ್ಬರು ಶಿಕ್ಷಕರು ಬೇರೆ ಶಾಲೆಗೆ ವರ್ಗಾವಣೆಯಾಗಿದೆ. ಹೀಗಾಗಿ   ಸಮಸ್ಯೆ ಕಾರಣವಾಗಿದೆ. ಪ್ರಭಾರ ಮುಖ್ಯೋಪಾಧ್ಯಾಯರು ಇರುವುದು  ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದಾರೆ. ಹೀಗಾಗಿ ಈಗ ಶಿಕ್ಷಕರ ನೇಮಕವಾಗಬೇಕು ಎಂಬ ಒತ್ತಾಯ ಕೇಳಿಬಂದಿದೆ.

Advertisement

ಗ್ರಾಮಸ್ಥರ ಬೇಡಿಕೆ ಹೀಗಿದೆ:

ವರ್ಗಾವಣೆಯಾದ ಶಿಕ್ಷಕರು ಮತ್ತೆ ಇದೇ ಶಾಲೆಗೆ ಬರಬೇಕು, ಮುಖ್ಯೋಪಾಧ್ಯಾಯರ ನೇಮಕವಾಗಬೇಕು, ಹೆಚ್ಚುವರಿ ಇಬ್ಬರು ಅತಿಥಿ ಶಿಕ್ಷಕರ ನೇಮಕವಾಗಬೇಕು, ಕನಿಷ್ಠ 2 ಶಾಲಾ ಕೊಠಡಿ  ನಿರ್ಮಾಣವಾಗಬೇಕು  ಎಂದು  ಒತ್ತಾಯಿಸಿದ್ದಾರೆ. 15 ದಿನಗಳೊಳಗೆ ವ್ಯವಸ್ಥೆ ಆಗದೇ ಇದ್ದರೆ ಪ್ರತಿಭಟನೆ ನಡೆಸಲಾಗುವುದು. ಅದೂ ಕೈಗೆ ಕಪ್ಪುಪಟ್ಟಿ ಧರಿಸಿ ಶ್ರಮದಾನದ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸ ಬೆಳೆ…. ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ
April 24, 2024
2:57 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಅಡಿಕೆ ಆಮದು ಒಪ್ಪಂದು ರದ್ದು…! | ಭರವಸೆ ನೀಡಿದ ಕಾಂಗ್ರೆಸ್‌ |
April 24, 2024
2:23 PM
by: ದ ರೂರಲ್ ಮಿರರ್.ಕಾಂ
24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror