Advertisement
ಸುದ್ದಿಗಳು

ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಶಾಲೆಯಲ್ಲಿ ಶಿಕ್ಷಕರ ಕೊರತೆ : ಪ್ರತಿಭಟನೆಗೆ ನಿರ್ಧಾರ

Share

ಕೊಲ್ಲಮೊಗ್ರ: ತಾಲೂಕಿನ ಗ್ರಾಮೀಣ ಭಾಗವಾದ ಕೊಲ್ಲಮೊಗ್ರದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು ಈ ಬಗ್ಗೆ ಹಲವು ಬಾರಿ ಇಲಾಖೆಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲು ಈಗಾಗಲೇ ಚಿಂತನೆ ನಡೆದಿದೆ.

ಗ್ರಾಮೀಣ ಭಾಗದ ವಿದ್ಯಾದೇಗುವಲವಾದ ಈ ಸರಕಾರಿ ಶಾಲೆಯಲ್ಲಿ ಕಳೆದ ವರ್ಷ 71 ವಿದ್ಯಾರ್ಥಿಗಳು ಇದ್ದರು. ಈ ಬಾರಿ 61 ಕ್ಕೆ ಇಳಿದಿದೆ. ಕಾರಣ ಶಿಕ್ಷಕರ ಕೊರತೆ. ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರು, ಒಬ್ಬರು ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಇದ್ದಾರೆ. ಆದರೆ ಈ ಶಾಲೆಗೆ ನೇಮಕವಾದ ಒಬ್ಬರು ಶಿಕ್ಷಕರು ಬೇರೆ ಶಾಲೆಗೆ ವರ್ಗಾವಣೆಯಾಗಿದೆ. ಹೀಗಾಗಿ   ಸಮಸ್ಯೆ ಕಾರಣವಾಗಿದೆ. ಪ್ರಭಾರ ಮುಖ್ಯೋಪಾಧ್ಯಾಯರು ಇರುವುದು  ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದಾರೆ. ಹೀಗಾಗಿ ಈಗ ಶಿಕ್ಷಕರ ನೇಮಕವಾಗಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಗ್ರಾಮಸ್ಥರ ಬೇಡಿಕೆ ಹೀಗಿದೆ:

ವರ್ಗಾವಣೆಯಾದ ಶಿಕ್ಷಕರು ಮತ್ತೆ ಇದೇ ಶಾಲೆಗೆ ಬರಬೇಕು, ಮುಖ್ಯೋಪಾಧ್ಯಾಯರ ನೇಮಕವಾಗಬೇಕು, ಹೆಚ್ಚುವರಿ ಇಬ್ಬರು ಅತಿಥಿ ಶಿಕ್ಷಕರ ನೇಮಕವಾಗಬೇಕು, ಕನಿಷ್ಠ 2 ಶಾಲಾ ಕೊಠಡಿ  ನಿರ್ಮಾಣವಾಗಬೇಕು  ಎಂದು  ಒತ್ತಾಯಿಸಿದ್ದಾರೆ. 15 ದಿನಗಳೊಳಗೆ ವ್ಯವಸ್ಥೆ ಆಗದೇ ಇದ್ದರೆ ಪ್ರತಿಭಟನೆ ನಡೆಸಲಾಗುವುದು. ಅದೂ ಕೈಗೆ ಕಪ್ಪುಪಟ್ಟಿ ಧರಿಸಿ ಶ್ರಮದಾನದ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

5 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

13 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

17 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago